ಬೆಂಗಳೂರು: ವೈಟ್ ಫೀಲ್ಡ್ ನ ಬ್ರೂಕ್ ಫೀಲ್ಡ್ ನಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆಸಿದ ಬಾಂಬರ್ ಯಾರೆಂಬುದು ಗೊತ್ತಾಗಿದ್ದು, ಅದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್ಐಎ ಅಧಿಕಾರಿಗಳು ಧೃಡಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಬಾಂಬರ್ ಯಾರೆಂಬುದು ಎನ್ಐಎನ್ಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಹೈದ್ರಾಬಾದ್ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಬಾಂಬರ್ಗಾಗಿ ಶೋಧ ನಡೆಸುತ್ತಿದ್ದಾರೆ ಎಂದರು.
ಕಳೆದ ಮಾರ್ಚ್ 1ರಂದು ಮಧ್ಯಾಹ್ನ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಜನ ಗಾಯಗೊಂಡಿದ್ದು,ಮಹಿಳೆಯೊಬ್ಬರು ಕಣ್ಣು ಕಳೆದುಕೊಂಡಿದ್ದರು.




