ಧಾರವಾಡ: ರಂಗಾಯಣ ಧಾರವಾಡ ರಂಗತಂಡಗಳಿಗೆ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಡಿ.28 ಹಾಗೂ 29 ರಂದು ಸಂಜೆ 6.00ಕ್ಕೆ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ “ರಂಗಾಯಣ ನಾಟಕೋತ್ಸವ”ವನ್ನು ಹಮ್ಮಿಕೊಂಡಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಅಪರ ಜಿಲ್ಲಾಧಿಕಾರಿ ಡಾ.ಸಿ.ಡಿ ಗೀತಾ ನಾಟಕೋತ್ಸವವನ್ನು ಉದ್ಘಾಟಿಸಲಿದ್ದಾರೆ. ರಂಗ ನಿರ್ದೇಶಕ ಹುಲುಗಪ್ಪ ಕಟ್ಟಿಮನಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಂಗಾಯಣ ನಿರ್ದೇಶಕ ಡಾ.ರಾಜು ತಾಳಿಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಡಿ.28 ರಂದು ಸಂಜೆ 6.30ಕ್ಕೆ ರಮೇಶ ಕರಬಸಮ್ಮನವರ ಕಥೆ, ನಿರ್ದೇಶಿಸಿದ ಅಂಗುಲಿಮಾಲ ದೊಡ್ಡಾಟ ಪ್ರಸಂಗವನ್ನು ಹುಬ್ಬಳ್ಳಿ ಜನಪದ ಕಲಾಬಳಗ ಟ್ರಸ್ಟ್(ರಿ) ಅವರು ಪ್ರಸ್ತುತಪಡಿಸಲಿದ್ದಾರೆ.

ಡಿ.29 ರಂದು ಸಂಜೆ 6.30ಕ್ಕೆ ನಾಟಕ ರೂಪ ಜಿ.ಪಿ ರಾಜರತ್ನಂ, ಗಾಯತ್ರಿ ಮಹಾದೇವ ಹೆಗ್ಗೋಡು ಅವರು ಪರಿಕಲ್ಪನೆ, ವಿನ್ಯಾಸ, ನಿರ್ದೇಶಿಸಿದ ಬಾಹುಬಲಿ ವಿಜಯ (ಪಂಪನ ಆದಿಪುರಾಣದ ಆಯ್ದ ಕಥಾ ಭಾಗ) ನಾಟಕವನ್ನು ಧಾರವಾಡ ಆಟ-ಮಾಟ ತಂಡ ಪ್ರಸ್ತುತಪಡಿಸಲಿದ್ದಾರೆ.





