ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಮಾಣಿಕ್ಯ ಸಿನಿಮಾದ ನಟಿ ರನ್ಯಾ ರಾವ್ ಅವರಿಗೆ ಬಿಜೆಪಿ ನಂಟಿದೆ. ಇದರ ದಿಕ್ಕು ತಪ್ಪಿಸಲು ಬಿಜೆಪಿ ನಾಯಕರು ಕಾಂಗ್ರೆಸ್ ಸಚಿವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ರನ್ಯಾ ರಾವ್ ಅವರಿಗೆ 12 ಎಕರೆ ಜಮೀನು ಮಂಜೂರು ಮಾಡಲಾಗಿತ್ತು ಎಂಬ ಆರೋಪಗಳಿವೆ. ಅವರು ಸಿಕ್ಕಿಬೀಳುವ ಭಯದಿಂದ ಬೇರೆಯವರ ಮೇಲೆ ಆರೋಪ ಮಾಡಿಬಿಡುತ್ತಾರೆ ಎಂದು ಆರೋಪಿಸಿದರು.
ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಹೆಸರನ್ನು ಬಹಿರಂಗಪಡಿಸಲಿ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ. ಯಾರು ರನ್ಯಾ ರಾವ್ ಅವರಿಗೆ ಬೆಂಬಲ ನೀಡಿದ್ದಾರೆ ಎಂಬುದನ್ನು ಹೆಸರು ಸಹಿತ ಹೇಳಲಿ. ಸದ್ಯಕ್ಕೆ ಸಿಬಿಐ ತನಿಖೆ ನಡೆಯುತ್ತಿದೆ. ಎಲ್ಲಾ ದೃಷ್ಟಿಕೋನದಿಂದಲೂ ತನಿಖೆ ನಡೆಸಿ ಸತ್ಯಾಂಶ ಹೊರಹಾಕಲಿ ಎಂದು ಸವಾಲೆಸೆದರು.
ಕಳೆದ 2 ವರ್ಷದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸಚಿವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಲ್ಲಿ ಯಾವುದೂ ಕೂಡ ಸತ್ಯ ಆಗಿಲ್ಲ. ಜನಪರವಾದ ಒಂದು ವಿಚಾರವನ್ನೂ ಬಿಜೆಪಿಯವರು ಚರ್ಚೆಗೆ ತೆಗೆದುಕೊಂಡಿಲ್ಲ. ಕೇವಲ ರಾಜಕೀಯ ಕಾರಣಕ್ಕಾಗಿಯೇ ಟೀಕೆ, ಆರೋಪ ಮಾಡುತ್ತಿದ್ದಾರೆ ಎಂದರು.



