ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರಸಾರಿ ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಇದೀಗ ದಲಿತ ಮತ್ತು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿ ಯಡಿಯೂರಪ್ಪ ಕುಟುಂಬಕ್ಕೆ ಸೆಡ್ಡು ಹೊಡೆದಿದ್ದ ಅವರು, ಇದೀಗ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವ ಅವರು ಬಾಗಲಕೋಟೆಯಲ್ಲಿ ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ದಲಿತ ಮತ್ತು ಹಿಂದುಳಿದ ವರ್ಗಗಳ ಮಠಾಧೀಶರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಬಿಜೆಪಿಯ ಎಲ್ಲಾ ಅಸಮಾಧಾನಗೊಂಡ ನಾಯಕರನ್ನು ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ.
ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್ ಸೇರಿದಂತೆ ಹಲವು ಪ್ರಮುಖ ನಾಯಕರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶ ನಡೆಸಲು ತೀರ್ಮಾನ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಪುತ್ರ ವಿಜಯೇಂದ್ರ ನಿರ್ಗಮಿಸುವವರೆಗೆ ತಾವು ಬಿಜೆಪಿ ಸೇರುವುದಿಲ್ಲ ಎಂದು ಘೋಷಿಸಿರುವ ಅವರು, ರಾಷ್ಟ್ರಭಕ್ತರ ಹೆಸರಿನಲ್ಲಿ ತಮ್ಮ ನೂತನ ಬ್ರಿಗೇಡ್ ಸಂಘಟಿಸುವುದಾಗಿ ಘೋಷಿಸಿದ್ದಾರೆ.



