ಬೆಂಗಳೂರು: ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶವಾಗಿದೆ. ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ ನನಗೆ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಸೂಸೈಡ್ ಬಾಂಬ್ ಜೊತೆ ಪಾಕಿಸ್ತಾನಕ್ಕೆ ಒಬ್ಬನೇ ಹೋಗಲು ಸಿದ್ದ, ಇದಕ್ಕೆ ಅಲ್ಲಾನ ಮೇಲಾಣೆ ಎಂದು ಕರ್ನಾಟಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ. ಪಾಕಿಸ್ತಾನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದೆಂದಿಗೂ ಅದು ನಮ್ಮ ಶತ್ರುದೇಶ ಎಂದರು.
ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ. ಅಗತ್ಯ ಬಿದ್ದರೆ ಸುಸೈಡ್ ಬಾಂಬ್ ಜೊತೆಗೆ ನಾನು ಹೋಗುತ್ತೇನೆ ಎಂದರು.




