ಬೆಂಗಳೂರು: ಕನ್ನಡ ವಿಶ್ವವಿದ್ಯಾಲಯಕ್ಕೆ ಕೂಡಲೇ 23 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಕಳೆದ 32 ವರ್ಷಗಳ ಹಿಂದೆ ಕಲ್ಯಾಣ ಕರ್ನಾಟಕ ಭಾಗವಾದ ಐತಿಹಾಸಿಕ ಸ್ಥಳ ಹಂಪಿಯಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಸಂಶೋಧನೆಗೆ ಮೀಸಲಾದ ವಿಶ್ವವಿದ್ಯಾಲಯವಾಗಿ ಸ್ಥಾಪನೆಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸರ್ಕಾರದಿಂದ ಸೂಕ್ತ ಅನುದಾನವಿಲ್ಲದೆ ಸಂಶೋಧನಾ ಯೋಜನೆಗಳನ್ನು ನಿರ್ವಹಿಸಲು, ಇವುಗಳನ್ನು ಪ್ರಕಟಿಸಲು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳ ವೇತನ ಹಾಗೂ ದಿನನಿತ್ಯದ ನಿರ್ವಹಣಾ ಕಾರ್ಯಗಳಿಗೆ ಬಹಳಷ್ಟು ತೊಡಕುಂಟಾಗಿರುವುದರಿಂದ ಕೂಡಲೇ 23 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯನವರು ತಮ್ಮ ರಾಜಕೀಯ ಜೀವನವನ್ನು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಪಾದರ್ಪಣೆ ಮಾಡಿ ಇಂದು ಮುಖ್ಯಮಂತ್ರಿಗಳಾಗಿರುವ ಸಂದರ್ಭದಲ್ಲಿ ಕನ್ನಡದ ಕೈಂಕರ್ಯಕ್ಕಾಗಿಯೇ ಮೀಸಲಿಟ್ಟಿರುವ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಕುಲಪತಿಗಳು ಪತ್ರ ಬರೆದು ನಂತರ ಸ್ವತಹ ಮುಖ್ಯಮಂತ್ರಿಗಳೇ ಅನುದಾನ ಬಿಡುಗಡೆ ಮಾಡಲು ಆದೇಶ ಮಾಡಿದ್ದರೂ ಸಹ ಆರ್ಥಿಕ ಇಲಾಖೆಯಿಂದ ಐದು ತಿಂಗಳಾದರೂ ಅನುದಾನ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದಿದ್ದಾರೆ.
ಇದರಲ್ಲಿ ಎಸ್ಸಿ ಎಸ್ ಪಿ / ಟಿ ಎಸ್ ಪಿ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗೆ ಮೀಸಲಿಟ್ಟಿರುವ ಹಣವೂ ಸೇರಿದೆ ಎಂದು ಅವರು ಗಮನ ಸೆಳೆದಿದ್ದಾರೆ.
ಕೂಡಲೇ ಅನುದಾನ ಬಿಡುಗಡೆ ಮಾಡದಿದ್ದಲ್ಲಿ ಕನ್ನಡ ಕಟ್ಟಾಳುವಾಗಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.




