ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ @siddaramaiah ನವರೇ,
ತಾವು ಊಟಿಯಲ್ಲಿ ಪಾರ್ಟಿ ಮಾಡುತ್ತಿರುವಾಗ ಇಲ್ಲಿ ಕನ್ನಡಿಗರು ನಿಮ್ಮ ಸರ್ಕಾರದ ಎಡವಟ್ಟುಗಳಿಂದ, ದುರಾಡಳಿತದಿಂದ, ಬೇಜವಾಬ್ದಾರಿಯಿಂದ ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆಯೂ ಒಮ್ಮೆ ನೆನಪಿಸಿಕೊಳ್ಳಿ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಸಿದ್ದರಾಮಯ್ಯನವರ ಸರ್ಕಾರದ ಎಡವಟ್ಟುಗಳು…
1. ಕೇಂದ್ರ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ 2 ವಾರ ಕಳೆದರೂ ಒಂದು ನಯಾ ಪೈಸೆ ಬರ ಪರಿಹಾರ ಇನ್ನೂ ರೈತರ ಕೈಸೇರಿಲ್ಲ.
2. ಹೈನುಗಾರರಿಗೆ 7 ತಿಂಗಳಿಂದ ಬಾಕಿ ಇರುವ 700 ಕೋಟಿ ರೂಪಾಯಿ ಇನ್ನೂ ಪಾವತಿ ಆಗಿಲ್ಲ.
3. ತೆಂಗು ಬೆಳೆಗಾರರ ನಷ್ಟದ ಬಗ್ಗೆ ಅಧ್ಯಯನ ನಡೆಸಲು ಇನ್ನೂ ಸಮಿತಿ ರಚಿಸಿಲ್ಲ.
4. ಹೆಣ್ಣು ಭ್ರೂಣ ಪತ್ತೆ ಹತ್ಯೆ ಪ್ರಕರಣದ ಜಾಲ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಇನ್ನೂ SIT ರಚನೆ ಆಗಿಲ್ಲ.
5. ಅಂಗನವಾಡಿಗಳಲ್ಲಿ ಊಟ ಆರೈಕೆ ಸರಿ ಇಲ್ಲದೆ 2 ಲಕ್ಷಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಕಡಿಮೆ ಆಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.
6. ಆಂಬ್ಯುಲೆನ್ಸ್ ಚಾಲಕರಿಗೆ ಮೂರು ತಿಂಗಳಿಂದ ವೇತನ ಪಾವತಿ ಆಗಿಲ್ಲ.
7. ರಾಜ್ಯದಲ್ಲಿ ಬಂಡವಾಳ ವೆಚ್ಚ 20% ಕುಸಿತಗೊಂಡು ಅಭಿವೃದ್ಧಿ ಶೂನ್ಯತೆ ಆವರಿಸಿದ್ದರೂ ತಮಗೆ ಯಾವುದೇ ಚಿಂತೆಯಿಲ್ಲ.
8. ಸಿಇಟಿ ಪ್ರಶ್ನೆಪತ್ರಿಕೆ ಎಡವಟ್ಟಿನಿಂದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ತಮಗೆ ಯಾವುದೇ ಚಿಂತೆಯಿಲ್ಲ.
9. ಒಂದು ವಾರದೊಳಗೆ ಬಾಕಿ ಬಿಲ್ ಪಾವತಿ ಆಗದಿದ್ದರೆ ಕಾಮಗಾರಿ ಸ್ಥಗಿತಗೊಳಿಸುತ್ತೇವೆ ಎಂದು ಗುತ್ತಿಗೆದಾರರ ಸಂಘದ ಗಡುವು ನೀಡಿದ್ದರೂ ನಿಮ್ಮ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ.
10. ಹುಬ್ಬಳ್ಳಿಯ ಸಹೋದರಿ ನೇಹಾ ಅವರ ಲವ್ ಜಿಹಾದ್ ಪ್ರಕರಣದಲ್ಲಿ 120 ದಿನಗೊಳಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದ ತಮಗೆ ಪ್ರಕರಣದ ತನಿಖೆ ಚುರುಕುಗೊಳಿಸುವ ಉದ್ದೇಶವೇ ಇಲ್ಲ.
ರಾಜ್ಯದಲ್ಲಿ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ, ರಾಜ್ಯದ ರೈತರು, ಮಹಿಳೆಯರು, ಯುವಕರು, ಬಡವರು ಸಾಲು ಸಾಲು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಊಟಿಯಲ್ಲಿ ಮಜಾ ಮಾಡಿಕೊಂಡು, ಪ್ರಧಾನಿ ಮೋದಿ ಅವರ ಬಗ್ಗೆ ಅನಾವಶ್ಯಕ ಟೀಕೆ ಮಾಡುತ್ತಾ ಚುನಾವಣೆ ನಂತರವೂ ರಾಜಕೀಯ ಮಾಡುತ್ತಿರುವ ತಮಗೆ ನಿಜಕ್ಕೂ ನಾಚಿಕೆ ಆಗಬೇಕು.
ಒಂದು ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಮಂತ್ರಿಯಾಗಿ ಕಳೆದ 23 ವರ್ಷಗಳಿಂದ ಸತತವಾಗಿ ಸರ್ಕಾರದ ಮುಖ್ಯಸ್ಥರಾಗಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಜನರ ಸೇವೆ ಮಾಡುತ್ತಿರುವ ಮೋದಿ ಅವರೆಲ್ಲಿ ತಾವೆಲ್ಲಿ. ನಾಲ್ಕು ವಾರ ಪ್ರಚಾರ ಮಾಡಿದ್ದಕ್ಕೆ ಊಟಿಯಲ್ಲಿ ಪಾರ್ಟಿ ಮಾಡಲು ಹೋಗಿರುವ ತಮಗೆ ಮೋದಿ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ?
ರಾಜ್ಯದ ಜನತೆಯ ಸಂಕಷ್ಟಗಳಿಗೆ ಸ್ಪಂದಿಸದೆ ಊಟಿಯಲ್ಲಿ ಮಜಾ ಮಾಡಲು ಹೋಗಿರುವ ತಮಗೆ ರಾಜ್ಯದ ಜನರ ಬಗ್ಗೆ ಎಷ್ಟು ಮಾತ್ರ ಬದ್ಧತೆ ಇದೆ ಅಂತ ತಾವೇ ಜಗಜ್ಜಾಹೀರು ಮಾಡಿದ್ದೀರಿ.
– ಆರ್ ಅಶೋಕ್, ವಿಪಕ್ಷ ನಾಯಕ



