ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ನಗುನಗುತ್ತಲೇ ಬಿಡುಗಡೆಯಾದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕಳೆದ 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್ನ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾದರು. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್ ಬಿಡುಗಡೆಯಾಗಿದ್ದಾರೆ.
ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.
ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.
ಒಂದೂವರೆ ತಿಂಗಳ ಹಿಂದೆಯೇ ಅನಾರೋಗ್ಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದ ನಟ ದರ್ಶನ್ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿರುವುದರಿಂದ ದರ್ಶನ್ ಕೂಡ ರಿಲೀಫ್ ಆಗಿದ್ದಾರೆ. ನಿನ್ನೆಯಷ್ಟೇ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡರನ್ನು ಕರೆದುಕೊಂಡು ಹೋಗಲು ಅವರ ಕುಟುಂಬಸ್ಥರು ಜೈಲಿನ ಬಳಿ ಬಂದಿದ್ದರು. ಅಪ್ಪ, ಅಮ್ಮ ಹಾಗೂ ಸಹೋದರ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಪವಿತ್ರಾ ಗೌಡ ತಾಯಿ ಪರಪ್ಪನ ಅಗ್ರಹಾರ ಜೈಲಿನ ಬಳಿ ಇರುವ ಮುನೇಶ್ವರ ದೇಗುಲಕ್ಕೆ ಪೂಜೆ ಸಲ್ಲಿಸಿದರು. ಸೆರೆಮನೆಯಿಂದ ಬಿಡುಗಡೆ ಆಗಿ ಆರ್.ಆರ್ ನಗರದ ಮನೆಗೆ ಪವಿತ್ರಾಗೌಡ ತೆರಳಿದರು.
ನಟಿ ಪವಿತ್ರಾ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ವಿಷಯ ತಿಳಿದು ಮಾಜಿ ಪತಿ ಸಂಜಯ್ ಸಿಂಗ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ತಮ್ಮ ಮಗಳಾದ ಖುಷಿಯನ್ನು ಸಂಪರ್ಕ ಮಾಡುವುದಾಗಿಯೂ ಹೇಳಿದ್ದಾರೆ. ಈಗಲೂ ಪವಿತ್ರಾ ಗೌಡ ತಪ್ಪು ಮಾಡಿಲ್ಲ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಪವಿತ್ರ ಗೌಡ ಕಾರಣ ಆಗಿರಬಹುದು. ಆದರೆ ಆಕೆ ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಪತ್ನಿಯ ಬೆಂಬಲಕ್ಕೆ ನಿಂತಿದ್ದಾರೆ.




