ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೇಸ್ನಲ್ಲಿ ಹೆಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್ಗೆ ಈ ಹಿಂದೆಯೇ ಎಸ್ ಐಟಿ ಅಧಿಕಾರಿಗಳು ರಾಜ್ಯಪಾಲರ ಬಳಿ ಅನುಮತಿ ಕೇಳಿದ್ದರು.
ಈ ವೇಳೆ ರಾಜ್ಯಪಾಲರು ದೋಷಾರೋಪ ಪಟ್ಟಿಯನ್ನು ಇಂಗ್ಲಿಷ್ಗೆ ಅನುವಾದ ಮಾಡಿ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ ಇದೀಗ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ಇಂಗ್ಲಿಷ್ ಗೆ ಅನುವಾದ ಮಾಡಲಾಗಿದೆ.
ಸುಮಾರು 4,500 ಪುಟಗಳ ದೋಷಾರೋಪ ಪಟ್ಟಿ ಅನುವಾದ ಮಾಡಿರುವ ಎಸ್ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.




