ಬೆಂಗಳೂರು: ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ಧಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದಿದ್ದಾರೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ ಎಸ್ ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಿದ್ದೇನೆ ಎಂದಿದ್ದಾರೆ.





