ಬೆಂಗಳೂರು: ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ ಟಿ ರವಿ, ಮತೀಯ ಆಧಾರದ ಮೇಲೆ ಮೀಸಲಾತಿ ಕೊಡುವುದು ಸಂವಿಧಾನ ವಿರೋಧಿ, ಅಂಬೇಡ್ಕರ್ ಚಿಂತನೆಗೆ ವಿರುದ್ಧವಾದ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ರಚನೆ ವೇಳೆಯೇ ಮತೀಯ ಆಧಾರದ ಮೇಲೆ ಮೀಸಲಾತಿ ಬಗ್ಗೆ ಚರ್ಚೆ ನಡೆಯಿತು. ಮತೀಯ ಆಧಾರದ ಮೇಲೆ ಮೀಸಲಾತಿಗೆ ಅಂಬೇಡ್ಕರ್ ಒಪ್ಪಿಕೊಳ್ಳುವುದಿಲ್ಲ. ಆದರೆ ಇವತ್ತು ಮಾತೆತ್ತಿದರೆ ಸಂವಿಧಾನ, ಅಂಬೇಡ್ಕರ್ ಹೆಸರು ಹೇಳುವವರು ಸಂವಿಧಾನಕ್ಕೂ, ಅಂಬೇಡ್ಕರ್ ಚಿಂತನೆಗೂ ವಿರುದ್ಧವಾಗಿ ಮತೀಯ ಆಧಾರದ ಮೇಲೆ ಮೀಸಲಾತಿ ಕೊಡಲು ಮುಂದಾಗಿದ್ದಾರೆ ಎಂದರು.
ಸಂವಿಧಾನ, ಅಂಬೇಡ್ಕರ್ ವಿರೋಧಿಗಳು, ಜಿನ್ನಾನ ಸಮರ್ಥನೆ ಮಾಡೋರು, ಪಾಕಿಸ್ತಾನ ಸಮರ್ಥನೆ ಮಾಡೋರು ಮಾತ್ರ ಇದನ್ನ ಪ್ರಸ್ತಾಪಿಸುತ್ತಾರೆ. ಪಾಕಿಸ್ತಾನದ ಅಪ್ಪಂದಿರಿಗೆ ಹುಟ್ಟಿರೋರು ಮಾತ್ರ ಇಂಥ ಯೋಚನೆ ಮಾಡ್ತಾರೆ. ಸಂವಿಧಾನದ ಮೇಲೆ ನಂಬಿಕೆ ಇರೋರು ಯಾರೂ ಇದನ್ನು ಯೋಚಿಸಲ್ಲ, ಪ್ರಸ್ತಾಪಿಸಲ್ಲ ಎಂದರು.



