ಬಳ್ಳಾರಿ: ಸಿರುಗುಪ್ಪ ತಾಲ್ಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಅಕ್ರಮ ದಾಸ್ತಾನು ಹಾಗೂ ಅಕ್ರಮ ಪಡಿತರ ಧಾನ್ಯ ಸಾಗಾಣಿಕೆ, ದಾಸ್ತಾನು ಮಾಡಿರುವ ಕುರಿತು ದಾಖಲುಗೊಂಡ ವಿವಿಧ ಪ್ರಕರಣಗಳಲ್ಲಿ ಜಪ್ತು ಪಡಿಸಿಕೊಂಡ 701.95 ಕ್ವಿಂಟಾಲ್ ಅಕ್ಕಿಯನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಜ.20 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ಪಟ್ಟಣದ ಎಪಿಎಂಸಿ ಆವರಣದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಸಗಟು ಗೋದಾಮು ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಸಿರುಗುಪ್ಪ ತಹಶೀಲ್ದಾರರು ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಆಸಕ್ತಿಯುಳ್ಳ ಬಿಡ್ಡುದಾರರು ವಿವಿಧ ಷರತ್ತಿಗೊಳಪಟ್ಟು ಭದ್ರತಾ ಠೇವಣಿ ನೀಡಿ ನೋಂದಾಯಿಸಿಕೊಂಡವರಿಗೆ ಮಾತ್ರ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತ ಬಿಡ್ಡುದಾರರು ರೂ.1,50,000/- ಮುಂಗಡ ಭದ್ರತಾ ಠೇವಣಿ ಮೊತ್ತವನ್ನು ಮಾನ್ಯ ತಹಶೀಲ್ದಾರರು, ಸಿರುಗುಪ್ಪ ಇವರ ಹೆಸರಲ್ಲಿ ಡಿಡಿಯನ್ನು ಜ.20 ರಂದು ಸಂಜೆ 05.30 ರೊಳಗೆ ನೋಂದಾಯಿಸಿ, ಸಿರುಗುಪ್ಪದ ಆಹಾರ ನಿರೀಕ್ಷಕರಾದ ಮಹಾರುದ್ರ ಗೌಡ(ಮೊ.9986415163) ಮತ್ತು ವಿಜಯ್ ಕುಮಾರ್(ಮೊ.9449738127) ಇವರಿಂದ ಸ್ವೀಕೃತಿ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.




