ದಾವಣಗೆರೆ: ಹರಿಹರ ನಗರದಿಂದ ದಾವಣಗೆರೆ ಕಡೆಗೆ ಬರುವ ಹಳೇ ಪಿ.ಬಿ ರಸ್ತೆಗೆ ಬಾರದೇ ಹರಿಹರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮುಖಾಂತರ ಹೊಸ ಎನ್.ಹೆಚ್-48 ರಸ್ತೆ ಮೂಲಕ ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಮಾರ್ಗವಾಗಿ ದಾವಣಗೆರೆ ನಗರಕ್ಕೆ ಬಂದು ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೆಟ್ ಕ್ರಾಸ್ ಮುಖಾಂತರ ಎಪಿಎಂಸಿಗೆ ಹೋಗುವುದು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮೇಲ್ಕಂಡ ಮಾರ್ಗದಲ್ಲಿ ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಮಾರ್ಗವಾಗಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್ಸು ಬೆಂಗಳೂರು, ಬೆಳಗಾವಿ ಕಡೆಗೆ ಹೋಗುವುದು. ನಂತರ ಖಾಸಗಿ ಬಸ್ಗಬಳು ಮೇಲ್ಕಂಡ ಮಾರ್ಗದಲ್ಲಿ ಬಂದು ಹಳೇ ಪಿ.ಬಿ. ರಸ್ತೆಯ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಜನರನ್ನು ಇಳಿಸಿ, ಹತ್ತಿಸಿಕೊಂಡು ವಾಪಾಸ್ ಅದೇ ಮಾರ್ಗದಲ್ಲಿ ಸಂಚರಿಸುವುದು.
ಚಿತ್ರದುರ್ಗದ ಕಡೆಯಿಂದ ಬರುವ ಎಲ್ಲಾ ಭಾರಿ ಮತ್ತು ಲಘು ಸರಕು ಸಾಗಾಣಿಕ ವಾಹನಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೆಟ್ ಕ್ಲಾಸ್ ಮುಖಾಂತರ ಎಪಿಎಂಸಿಗೆ ಹೋಗುವುದು. ಕೆ.ಎಸ್.ಆರ್.ಟಿ.ಸಿ ಬಸ್ಗಬಳು ಮೇಲ್ಕಂಡ ಮಾರ್ಗದಲ್ಲಿ ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಮಾರ್ಗವಾಗಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್ಸು ಬೆಂಗಳೂರು, ಬೆಳಗಾವಿ ಕಡೆಗೆ ಹೋಗುವುದು. ಖಾಸಗಿ ಬಸ್ಗ ಳು ಮೇಲ್ಕಂಡ ಮಾರ್ಗದಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಜನರನ್ನು ಇಳಿಸಿ, ಹತ್ತಿಸಿಕೊಂಡು ವಾಪಾಸ್ ಅದೇ ಮಾರ್ಗದಲ್ಲಿ ಸಂಚರಿಸುವುದು.
ಹಳೇ ಪಿ.ಬಿ ರಸ್ತೆಯ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ಎಂ.ಜಿ.ಸರ್ಕಲ್ ವರೆಗೆ ಯಾವುದೇ ರೀತಿಯ ಭಾರಿ ಮತ್ತು ಲಘು ಸರಕು ಸಾಗಾಣಿಕ ವಾಹನಗಳು ಮತ್ತು ಭಾರಿ ಮತ್ತು ಲಘು ಪ್ರಯಾಣಿಕರ ವಾಹನಗಳು ಸಂಚರಿಸದಂತೆ ನಿಷೇಧಿಸಿದೆ.




