ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ತಮ್ಮ ವಿರುದ್ಧ ದಾಖಲೆ ಕಳ್ಳತನ ಆರೋಪದಲ್ಲಿ ನೀಡಿದ್ದ ದೂರಿಗೆ ಡಿ. ರೂಪಾ ಮೌದ್ಗಿಲ್ ಅವರೇ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಅದರ ವಿವರ ಅಚ್ಚರಿ ಮೂಡಿಸುವಂತಿವೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಂತರಿಕ ಭದ್ರತಾ ವಿಭಾಗದ ಡಿಐಜಿ ವರ್ತಿಕಾ ಕಟಿಯಾರ್ ಶಿಸ್ತಿನ ಇಲಾಖೆಯಲ್ಲಿ ಇದ್ದುಕೊಂಡು ಅಶಿಸ್ತಿನ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ರೂಪಾ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
6-9-2024ರಂದು ಕೆಲವು ಕಾನ್ಸ್ಟೇಬಲ್ಗಳು ತಮ್ಮ ಕೊಠಡಿಯಿಂದ ಫೈಲ್ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹಾಗೇ ಕೆಲ ಫೈಲ್ಗಳ ಫೋಟೋಗಳನ್ನು ತೆಗೆದುಕೊಂಡಿದ್ದಾರೆ ಎಂದು ಅವರು (ವರ್ತಿಕಾ) ಹೇಳುತ್ತಾರೆ. ಆದರೆ ಅವರು ಯಾವುದೇ ಪುರಾವೆಗಳಿಲ್ಲದೆ ಈ ಅಸಂಬದ್ಧ ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನ್ಸ್ಟೆಬಲ್ಗಳ ಯಾವುದೇ ಹೇಳಿಕೆಗಳಿಲ್ಲ, ಫೈಲ್ಗಳ ಫೋಟೋ ತೆಗೆದುಕೊಂಡಿರುವ ಯಾವುದೇ ಪುರಾವೆಗಳಿಲ್ಲ. ಅವರ ಕೊಠಡಿ ಮತ್ತು ನನ್ನ ಕೊಠಡಿಯ ಮುಂದಿನ ಕಾರಿಡಾರ್ನಲ್ಲಿ ಕನಿಷ್ಠ 5 ಸಿಸಿಟಿವಿ ಕ್ಯಾಮೆರಾಗಳಿವೆ. ಅವರು ಯಾವುದೇ ಸಿಸಿಟಿವಿ ದೃಶ್ಯಾವಳಿಗಳನ್ನು ಲಗತ್ತಿಸಿಲ್ಲ ಎಂದು ರೂಪಾ ಹೇಳಿದ್ದಾರೆ.
ಒಂದು ವೇಳೆ ಈ ರೀತಿ ಘಟನೆ ನಡೆದಿದ್ದರೆ ಅವರು (ವರ್ತಿಕಾ) ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಹಿರಿಯ ಅಧಿಕಾರಿಗಳ ಗಮನಕ್ಕೆ ಏಕೆ ತರಲಿಲ್ಲ? ನನ್ನ ಮೇಲೆ ಎಡಿಜಿಪಿ ಐಎಸ್ಡಿ ಇದ್ದಾರೆ. ಪೊಲೀಸ್ ಮಹಾನಿರ್ದೇಶಕ ಐಎಸ್ಡಿ ಇದ್ದಾರೆ ಮತ್ತು ಪೊಲೀಸ್ ಪಡೆಯ ಮುಖ್ಯಸ್ಥರಾಗಿರುವ ಡಿಜಿ ಮತ್ತು ಐಜಿಪಿ ಇದ್ದಾರೆ. ಈ ಬಗ್ಗೆ ಅವರು ಏಕೆ ಇವರುಗಳ ಗಮನಕ್ಕೆ ತರಲಿಲ್ಲ. ನನ್ನ ಮೇಲೆ ಕೆಲವು ಕಡತಗಳ ಕಳ್ಳತನ ಮಾಡಿರುವ ಆರೋಪಿಗಳನ್ನು ಮಾಡುತ್ತಿದ್ದಾರೆ. ಅವರು ನಿಷ್ಪಕ್ಷಪಾತ ತನಿಖೆಗಾಗಿ ಇಲಾಖಾ ಮುಖ್ಯಸ್ಥರಿಗೆ ಪತ್ರ ಬರೆಯಬಹುದಿತ್ತಲ್ವಾ ಎಂದು ಪ್ರಶ್ನಿಸಿದ್ದಾರೆ.
ಅವರು ಸ್ವತಃ ನ್ಯಾಯಾಧೀಶರಾಗಿದ್ದಾರೆ. ಅವರು ನನ್ನ ಖ್ಯಾತಿಗೆ ಕಳಂಕ ತರುವ ಮತ್ತು ನನಗೆ ಮಾನಹಾನಿ ಮಾಡುವ ಏಕೈಕ ಉದ್ದೇಶದಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರ ಕ್ರಮಗಳು ಅಶಿಸ್ತು ಮತ್ತು ಘೋರ ದುಷ್ಕೃತ್ಯಕ್ಕೆ ಸಮಾನ. ಪೊಲೀಸ್ ಇಲಾಖೆಯು ಶಿಸ್ತುಬದ್ಧವಾಗಿದೆ. ಮುಖ್ಯ ಕಾರ್ಯದರ್ಶಿಗೆ ನೇರವಾಗಿ ಬರೆಯುವ ಕ್ರಮಗಳು ಅವಿಧೇಯತೆಗೆ ಸಮಾನವಾಗಿರುತ್ತದೆ. ಹೀಗಾಗಿ ವರ್ತಿಕಾ ಕಟಿಯಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಮೇಲ್ನೋಟಕ್ಕೆ ಆರೋಪಗಳು ಅಸಂಬದ್ಧವಾಗಿವೆ. ಏಕೆಂದರೆ ನಾನು ಹಿರಿಯ ಅಧಿಕಾರಿಯಾಗಿದ್ದೇನೆ. ಹೀಗಾಗಿ ಅಧಿಕೃತವಾಗಿ ಯಾವುದೇ ಫೈಲ್ ಗಳನ್ನು ತರಸಿಕೊಳ್ಳಬಹುದು ಮತ್ತು ವಿಲೇವಾರಿ ಮಾಡಬಹುದು. ಆದರೆ, ಅವರು ಯಾವುದೇ ತಲೆಬುಡವಿಲ್ಲದ ಸುಳ್ಳು ಹೇಳುತ್ತಿದ್ದಾರೆ. ವರ್ತಿಕಾ ಕಟಿಯಾರ್ ಅವರು ವೈಯಕ್ತಿಕ ಕಾರಣಗಳಿಗಾಗಿ ಇತರರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾರೆ ಎಂದು ಕೆಲ ಉದಾಹರಣೆಗಳ ಸಮೇತ ಸ್ಪಷ್ಟನೆ ನೀಡಿದ್ದಾರೆ.
ಅವರು 2010 ರ ಐಪಿಎಸ್ ಬ್ಯಾಚ್ಗೆ ಸೇರಿದವರಾಗಿದ್ದು, ಹೈದರಾಬಾದ್ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಪ್ರೊಬೇಷನರ್ ಆಗಿ ತರಬೇತಿ ಪಡೆಯುತ್ತಿದ್ದಾಗ ಐಪಿಎಸ್ ವಿಪುಲ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ಲಿಖಿತ ದೂರು ನೀಡಿದ್ದರು. ವಿಪುಲ್ ಕುಮಾರ್ ಒಬ್ಬ ಅತ್ಯುತ್ತಮ ಅಧಿಕಾರಿ ಮತ್ತು ಅವರು ಕರ್ನಾಟಕ ಕೇಡರ್ಗೆ ಸೇರಿದವರು ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಆ ದೂರು ಸುಳ್ಳು ಎಂದು ತಿಳಿದುಬಂತು ಎಂದಿದ್ದಾರೆ.
ತಮ್ಮ ಪತಿ ನಿತಿನ್ ಯೆಯೋಲಾ ವಿರುದ್ಧವೇ ಸುಳ್ಳು ದೂರು ನೀಡಿದ್ದರು. ಎಂಎಸ್ ಕಟ್ಟಡದ 6ನೇ ಮಹಡಿಯಲ್ಲಿರುವ ತಮ್ಮ ಕಚೇರಿಗೆ ಆ್ಯಸಿಡ್ ಎರಚಲು ಬಂದಿದ್ದರು. ಕೊಲ್ಲುವ ಉದ್ದೇಶ ಹೊಂದಿದ್ದರು. ಆದರೆ, ಕಚೇರಿಯಲ್ಲಿ ಇಲ್ಲದ ಕಾರಣ ತಪ್ಪಿಸಿಕೊಂಡೆ ಎಂದು ತಮ್ಮ ಪತಿ ವಿರುದ್ಧವೇ ಆರೋಪಿಸಿದ್ದರು ಎಂದು ರೂಪಾ ಅವರು ವರ್ತಿಕಾ ಬಗ್ಗೆ ಹಳೆಯ ಘಟನೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಸುಳ್ಳು ಆರೋಪಗಳನ್ನು ಹೊರಿಸಿ ಮಾಧ್ಯಮಗಳಿಗೆ ಸೋರಿಕೆ ಮಾಡಿ ತೀವ್ರ ದುಷ್ಕೃತ್ಯ ಮತ್ತು ಅಶಿಸ್ತಿನ ಕೃತ್ಯ ಎಸಗಿದ್ದಕ್ಕಾಗಿ ಸರ್ಕಾರ ಅವರ (ವರ್ತಿಕಾ) ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ರೂಪಾ ಅವರು ಸಿಎಸ್ಗೆ ಬರೆದಲ್ಲಿ ವಿನಂತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.




