ರೈಲುಗಳನ್ನು ಗದಗ ಜಂಕ್ಷನ್ ಬದಲಿಗೆ ಗದಗ ಬೈಪಾಸ್ ಮುಖಾಂತರ ಓಡಿಸುವುದು ಯಾವುದೇ ಮುಂದಾಲೋಚನೆ ಇಲ್ಲದ ತೀರ್ಮಾನ: ಈ ಬಗ್ಗೆ ನೈರುತ್ಯ ರೈಲ್ವೆ ಅಧಿಕಾರಿಗಳ ಜನರ ಪರವಾಗಿ ಮನವಿ ಸಲ್ಲಿಸಲಾಗುವುದು
ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗದಗ ಜಿಲ್ಲೆಯ ಹಸಿವು ಮತ್ತು ಭಯ ಮುಕ್ತ ಚಳುವಳಿಯಾಗಿರುವ ಎಸ್ಡಿಪಿಐ ಪಕ್ಷದ 2024-27 ಅವಧಿಗೆ ನಡೆದ ಆಂತರಿಕ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಬ್ರಾಂಚ್ ಪದಾಧಿಕಾರಿಗಳು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಗಳ ಸದಸ್ಯರುಗಳ ನಾಯಕರುಗಳ ಸಭೆ #LeadersMeet ಯು ಪಕ್ಷದ ಕಛೇರಿಯಲ್ಲಿ ನಡೆಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಪರಿಣಾಮಕಾರಿ ನಾಯಕತ್ವ (EffectiveLeadership) ಮತ್ತು ಪ್ರಸ್ತುತ ಸನ್ನಿವೇಶದಲ್ಲಿ ಪರ್ಯಾಯ ರಾಜಕಾರಣದ (Alternative politics) ಅಗತ್ಯತೆ ಬಗ್ಗೆ ತರಬೇತಿ ನೀಡಿ ನಾಯಕರುಗಳೊಂದಿಗೆ ಸಂವಾದ ನಡೆಸಿದರು.
ನಂತರ ನಡೆದ ವಿಶೇಷ ಜಿಲ್ಲಾ ಸಮಿತಿ ಸಭೆಯಲ್ಲಿ ಪಕ್ಷದ ಆಂತರಿಕ ಚುನಾವಣೆಯ ಅವಲೋಕನ ನಡೆಸಿ ನೂತನವಾಗಿ ಆಯ್ಕೆಯಾಗಿರುವ ನಾಯಕರುಗಳು ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ, ಹುಬ್ಬಳ್ಳಿ- ವಿಜಯಪುರ Exp & ಹುಬ್ಬಳ್ಳಿ – ಸೊಲ್ಲಾಪುರ Exp ರೈಲುಗಳನ್ನು ಗದಗ ಜಂಕ್ಷನ್ ಬದಲಿಗೆ ಗದಗ ಬೈಪಾಸ್ ಮುಖಾಂತರ ಓಡಿಸುವ ತೀರ್ಮಾನ ಯಾವುದೇ ಮುಂದಾಲೋಚನೆ ಇಲ್ಲದ ತೀರ್ಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ-ಹುಬ್ಬಳ್ಳಿ ಮಾರ್ಗದ ರೈಲುಗಳು ಗದಗ ಜಂಕ್ಷನ್ಗೆ ಬಂದು ಇಂಜಿನ್ ಬದಲಾಯಿಸಿ ಹೊರಡಲು 0 ರಿಂದ 15 ನಿಮಿಷ ಬೇಕಾಗುತ್ತದೆ. ಈ ಸಮಯ ಕಡಿಮೆ ಮಾಡಲು ಗದಗ ಬೈಪಾಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಆದರೆ ಈಗ ವಿಶೇಷ ರೈಲುಗಳನ್ನು ಬೈಪಾಸ್ ನಿಲ್ದಾಣದ ಮೂಲಕ ಸಂಚಾರ ನಡೆಸುವಂತೆ ಮಾಡಿ ಜಂಕ್ಷನ್ಗೆ ರೈಲು ಬರದಂತೆ ಮಾಡಲಾಗುತ್ತಿರುವುದು ಸರಿಯಲ್ಲ ಎಂದರು.
ಕೊಪ್ಪಳ, ವಿಜಯನಗರ, ಬಳ್ಳಾರಿ ಭಾಗದ ಜನರು ಗದಗ ಜಂಕ್ಷನ್ನಲ್ಲಿ ಇಳಿದು ರೈಲು ಬದಲಾವಣೆ ಮಾಡುತ್ತಿದ್ದರು. ಈಗ ರೈಲು ಗದಗ ಬೈಪಾಸ್ನಲ್ಲಿ ನಿಂತರೆ ಅಲ್ಲಿಂದ 200 ರೂ. ಆಟೋ ಬಾಡಿಗೆ ಪಾವತಿ ಮಾಡಿ ಮತ್ತೆ ಗದಗ ಜಂಕ್ಷನ್ಗೆ ಆಗಮಿಸಬೇಕು. ಬೈಪಾಸ್ಗೆ ರೈಲು ಸ್ಥಳಾಂತರ ಯಾವುದೇ ಮುಂದಾಲೋಚನೆ ಇಲ್ಲದ ತೀರ್ಮಾನ ಎಂದು ಆರೋಪಿಸಿದರು.
ಅಮೃತ್ ಭಾರತ್ ಯೋಜನೆಯಡಿ 23.05 ಕೋಟಿ ರೂ. ವೆಚ್ಚದಲ್ಲಿ ಗದಗ ರೈಲು ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಇಂತಹ ಸಮಯದಲ್ಲಿಯೇ ನಗರದಿಂದ 10 ಕಿ. ಮೀ. ದೂರದಲ್ಲಿರುವ ಬೈಪಾಸ್ ನಿಲ್ದಾಣಕ್ಕೆ ರೈಲುಗಳನ್ನು ಸ್ಥಳಾಂತರ ಮಾಡುತಿರುವುದು ಉತ್ತರ ಕರ್ನಾಟಕ ಭಾಗದ ರೈಲು ಪ್ರಯಾಣಿಕರು ಅದರಲ್ಲೂ ಗದಗದ ಜನರಿಗೆ ರೈಲ್ವೆ ಇಲಾಖೆ ಮಾಡುತಿರುವ ಅನ್ಯಾಯವಾಗಿದೆ. ಗದಗ ಜಂಕ್ಷನ್ಗೆ ರೈಲು ಬರಬೇಕು ಎಂಬುದು ಈ ಭಾಗದ ಜನರ ಬೇಡಿಕೆಯಾಗಿದೆ ಎಂದರು.
ಗದಗ ಜಿಲ್ಲಾ ನಾಯಕರು ಈ ಬಗ್ಗೆ ಪಕ್ಷದ ವತಿಯಿಂದ ನೈರುತ್ಯ ರೈಲ್ವೆ ಅಧಿಕಾರಿಗಳಿಗೆ ಜನರ ಪರವಾಗಿ ಮನವಿ ಸಲ್ಲಿಸಲು ಸಲಹೆ ನೀಡಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು ಬಿಲಾಲ್ ಗೋಕಾವಿ, ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ, ಕಾರ್ಯದರ್ಶಿ ಇರ್ಫಾನ್ ಗುಳಗುಂದಿ, ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೊಹಮ್ಮದ್ ಅಫ್ಫಾನ್, ಉಪಾಧ್ಯಕ್ಷ ಮುಸ್ತಾಕ್ ಹೊಸಮನಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಸ್ಮಾಯಿಲ್ ನದಾಫ್, ಉಪಾಧ್ಯಕ್ಷ ಮುಝಮ್ಮಿಲ್ ಮತ್ತು ಸದಸ್ಯರು ಉಪಸ್ಥಿತರಿದ್ದರು.




