ಧಾರವಾಡ: ಧಾರವಾಡದಲ್ಲಿ ಕೇಂದ್ರ ಕಚೇರಿ ಹೊಂದಿರುವ ರಾಜ್ಯ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ಅವರು ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯಲ್ಲಿನ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಸರಕಾರ ತಮ್ಮ ಮೇಲೆ ಭರವಸೆಯಿಟ್ಟು ಈ ಜವಾಬ್ದಾರಿ ವಹಿಸಿದೆ. ಅಕಾಡೆಮಿಯ ಸಿಬ್ಬಂದಿಗೆ ವೇತನ ಮತ್ತು ಕಾರ್ಯಚಟುವಟಿಕೆಗಳನ್ನು ನಡೆಸಲು ಅಗತ್ಯ ಅನುದಾನ ಪಡೆಯಲಾಗುವುದು. ಈ ಮೂಲಕ ಅಕಾಡೆಮಿ ನಿರಂತರವಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ಕೈಗಾರಿಕೆಗಳಿಂದ ಸಿಎಸ್ ಆರ್ ಅನುದಾನ ಪಡೆದು ಇನ್ನೂ ಅಧಿಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಉದ್ದೇಶವಿದೆ. ಈ ದಿಸೆಯಲ್ಲಿ ಅಕಾಡೆಮಿ ಸಿಬ್ಬಂದಿ ಮತ್ತು ಪರಿಣಿತರ ಜೊತೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.
ಬಾಲ ವಿಕಾಸ ಅಕಾಡೆಮಿಯನ್ನು ಕ್ರಿಯಾಶೀಲಗೊಳಿಸುವ ಪಣತೊಟ್ಟು, ಅಕಾಡೆಮಿಯ ನೇತೃತ್ವವಹಿಸಿಕೊಂಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಅಕಾಡೆಮಿಯ ಯೋಜನಾಧಿಕಾರಿ ಭಾರತಿ ಶೆಟ್ಟರ್ ಹಾಗೂ ಮಲ್ಲನಗೌಡ ಪಾಟೀಲ, ಬಿ.ವೈ.ಪಾಟೀಲ, ದಶರಥರಾವ ದೇಸಾಯಿ, ಬಸವರಾಜ ಮರಿತಮ್ಮನವರ, ಶಿವಶರಣ ಕಲಬಶೆಟ್ಟರ್ ಸೇರಿದಂತೆ ಇತರರು ಹಾಜರಿದ್ದರು.
ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದ ಸಂಗಮೇಶ ಅವರು, ತಮ್ಮ ಉನ್ನತ ಶಿಕ್ಷಣವನ್ನು ಧಾರವಾಡದಲ್ಲಿಯೇ ಪೂರೈಸಿದ್ದಾರೆ. ಕರ್ನಾಟಕ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ಆಗಿದ್ದ ಅವರು, ವಿದ್ಯಾರ್ಥಿ ಜೀವನದಿಂದ ಸಮಾಜಮುಖಿ ಚಿಂತನೆ, ಸಾಮಾಜಿಕ ಕಾರ್ಯ ಮತ್ತು ಸಮುದಾಯ ಅಭಿವೃದ್ಧಿಯ ಕಳಕಳಿ ಹೊಂದಿದ್ದಾರೆ.




