ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಸಂತೋಷ್ ಲಾಡ್ 

6 months ago

ಸಂಕಲ್ಪ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಸಂತೋಷ್ ಲಾಡ್ 

ಧಾರವಾಡ: ಸಂಕಲ್ಪ ಯೋಜನೆಯಡಿಯಲ್ಲಿ ತರಬೇತಿ ಪಡೆದ ಅರ್ಹ ಫಲಾನುಭವಿಗಳಿಗೆ ಕೆಡಿಪಿ ಸಭೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೊಲಿಗೆ ಯಂತ್ರವನ್ನು ವಿತರಿಸಿದರು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರವಾಗಿ ಸಾಲ ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ.

ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ (ರೂ.20,000 ಸಬ್ಸಿಡಿ) ಹಾಗೂ ಗರಿಷ್ಠ ರೂ.2 ಲಕ್ಷಗಳ (ರೂ.40,000 ಸಬ್ಸಿಡಿ) ಆರ್ಥಿಕ ನೆರವು ಒದಗಿಸುವ ಸರ್ಕಾರದ ಮಹತ್ವದ ಯೋಜನೆಯ ಪೋಸ್ಟರ್ ಗಳನ್ನು ಪ್ರದರ್ಶಿಸಲಾಯಿತು.

Leave a Reply