ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ರಮೇಶ ಕತ್ತಿ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೇಲ್ನೋಟಕ್ಕೆ ಅದು ನಿಜವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂತಹ ಅಸಂವೇದನಾಶೀಲ ಮಾತುಗಳು ಸಮಾಜದ ಸೌಹಾರ್ದತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ಗಂಭೀರ ಧಕ್ಕೆ ತರುತ್ತವೆ. ಆದ್ದರಿಂದ, ಕಾನೂನಿನ ಪ್ರಕಾರ ತನಿಖೆಯನ್ನು ಕೈಗೊಂಡು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಕೂಡ ಆಗ್ರಹಿಸುತ್ತೇನೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಾತಿಯಂತಹ ವಿಷವನ್ನು ಬೇರುಸಹಿತ ನಿರ್ಮೂಲನೆಗೊಳಿಸಲು ತಮ್ಮ ಜೀವನವನ್ನೇ ಅರ್ಪಿಸಿದ ಮಹಾನ್ ತತ್ವಜ್ಞಾನಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ “ಸಮಾನತೆ, ಮಾನವೀಯತೆ ಮತ್ತು ಸಹೋದರತೆ” ಎಂಬ ಸಿದ್ಧಾಂತಗಳೇ ನಮ್ಮ ಮಾರ್ಗ ಮತ್ತು ದಾರಿದೀಪವಾಗಬೇಕು — “ನಾ ಹೆಚ್ಚು, ನೀ ಹೆಚ್ಚು” ಎಂಬ ಜಾತಿಯ ವಿಷವಲ್ಲ.
– ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ




