ಬೆಂಗಳೂರು: ಕಬ್ಬಿಣ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಬಂಧಿತ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಸೆಪ್ಟೆಂಬರ್ 12ರವರೆಗೆ ಜಾರಿ ನಿರ್ದೇಶನಾಲಯ (ಇಡಿ)ದ ಕಸ್ಟಡಿಗೆ ನೀಡಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬಂಧಿತ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬುಧವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಸೈಲ್ ಅವರನ್ನು ಸೆ.12ರವರೆಗೆ ಎರಡು ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು.
ಪ್ರಕರಣದಲ್ಲಿ ಅಕ್ರಮವಾಗಿ ಹಣದ ವರ್ಗಾವಣೆ ಸಹ ಕಂಡುಬಂದ ಹಿನ್ನೆಲೆಯಲ್ಲಿ, ಇಸಿಐಅರ್ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಪ್ರತ್ಯೇಕ ತನಿಖೆ ಆರಂಭಿಸಿದ್ದರು. ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿದಾಗ ನಗದು, ಚಿನ್ನಾಭರಣ ಸಹಿತ 13 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ಅವರಿಗೆ ನೋಟಿಸ್ ನೀಡಿದ್ದರು.




