ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನಿವೃತ್ತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಜೂನ್ 22 ರವರೆಗೆ ಮರು ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ 05 ರಿಂದ ಆರಂಭಗೊಂಡಿದ್ದು, ಕಾರ್ಯದರ್ಶಿಗಳು, ಏಕ ಸದಸ್ಯ ಆಯೋಗ, ಬೆಂಗಳೂರು ಅವರ ಆದೇಶದಂತೆ ಸಮೀಕ್ಷಾ ಕಾರ್ಯವನ್ನು ಜೂನ್ 22 ರವರೆಗೆ ಕೈಗೊಳ್ಳಲು ಮರು ವಿಸ್ತರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಎರಡನೆ ಹಂತದಲ್ಲಿ, ನಾಗರೀಕ ಸೇವಾ ಕೇಂದ್ರಗಳಾದ “ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ, ಮನೆ-ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ನಮೂದಿಸುವ ಕಾರ್ಯ ಜೂನ್ 22 ರವರೆಗೆ ಜರುಗಲಿದೆ. ಮೂರನೆ ಹಂತದಲ್ಲಿ ಸ್ವಯಂ ಘೋಷಣೆ- ಆನ್ಲೈನ್ ಲಿಂಕ್ https://schedulecastesurvykarnataka.gov.i/selfdeclartion ಬಳಸಿ ಸಮೀಕ್ಷೆ ಕಾರ್ಯವೂ ಕೂಡ ಜೂನ್ 22 ರವರೆಗೆ ಜರುಗಲಿದೆ.
ಪರಿಷ್ಕೃತ ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.





