ಬೆಂಗಳೂರು: ನಿಗದಿತ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಏಳು ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ನೋಟು ಎಣಿಸುವ ಯಂತ್ರ ಸೇರಿದಂತೆ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ-ಪಾಸ್ತಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬೆಂಗಳೂರು, ಬೆಳಗಾವಿ ಚಿತ್ರದುರ್ಗ ರಾಯಚೂರು ಸೇರಿದಂತೆ 10 ಜಿಲ್ಲೆಗಳ 25 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.
ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿ ಕಚೇರಿಯ ಪ್ರಥಮ ವಿಭಾಗದ ಸಹಾಯಕ ಸಂಜಯ್ ಮಾಂಡೆಡ್, ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ವ್ಯವಸ್ಥಾಪಕ ಶಶಿಧರ್, ಬಾಗಲಕೋಟೆಯ ಹೊಲಗೇರಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಹಿರೇಮಠ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಬ್ಬಾಳ ವಿಭಾಗದ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಾಧವರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ರಾಯಚೂರು ಜಿಲ್ಲಾ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಗರಾವ್ ಗುಜ್ಜರ್, ಪಶುಸಂಗೋಪನಾ ಇಲಾಖೆಯ ಸಂಜಯ್ ಅಣ್ಣಪ್ಪ ದುರ್ಗಣ್ಣನವರ್ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.



