ಶಿವಮೊಗ್ಗ: ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಜಿಲ್ಲಾ ತಂಡಗಳನ್ನು ಕಳುಹಿಸಿಕೊಡಲು ಜಿಲ್ಲಾ ಮಟ್ಟದ ಯುವಜನೋತ್ಸವದ ಆಯ್ಕೆ ಸ್ಪರ್ಧೆಗಳನ್ನು ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.16 ರಂದು ಬೆಳಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಯುವಜನೋತ್ಸವದ ಸ್ಪರ್ಧೆಗಳು: ಜನಪದ ನೃತ್ಯ(ತಂಡ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ 10 ಜನರು 15 ನಿಮಿಷ ಭಾಗವಹಿಸಲು ಸಮಯವಿರುತ್ತದೆ. ಜನಪದ ಗೀತೆ (ತಂಡ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ 10 ಜನರು 07 ನಿಮಿಷ ಸಮಯ, ಜನಪದ ನೃತ್ಯ( ವೈಯಕ್ತಿಕ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಒಬ್ಬರು 07 ನಿಮಿಷ ಸಮಯ, ಜನಪದ ಗೀತೆ ( ವೈಯಕ್ತಿಕ) ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಒಬ್ಬರು 07 ನಿಮಿಷ ಸಮಯವಿರುತ್ತದೆ. ವಿಷಯಾಧಾರಿತ ಸ್ಪರ್ಧೆಗಳು 40 ಜನರು, ಕವಿತೆ ಬರೆಯುವುದು 2 ಜನ 60 ನಿಮಿಷ ಸಮಯ, ಕಥೆ ಬರೆಯುವುದು 3 ಜನ 60 ನಿಮಿಷ ಸಮಯ, ಚಿತ್ರ ಕಲೆ 2 ಜನ 90 ನಿಮಿಷ, ಘೋಷಣೆ ಸ್ಪರ್ಧೆ 2 ಜನ 3 ನಿಮಿಷ ಸಮಯ, ಯುವ ಕೃತಿ ವಿಭಾಗದಲ್ಲಿ ಗುಡಿ ಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳು 7 ಜನರು ಭಾಗವಹಿಸಬಹುದು.
ಭಾಗವಹಿಸುವ ಯುವಕ, ಯುವತಿಯರು 15 ರಿಂದ 29 ವರ್ಷ ವಯೋಮಿತಿಯೊಳಗಿರಬೇಕು. ನೊಂದಾವಣೆ ಸಮಯದಲ್ಲಿ ವಯಸ್ಸಿನ ದೃಢೀಕರಣಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ/ಜನನ ಪ್ರಮಾಣ ಪತ್ರ/ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಗ್ರಾಮೀಣ ಪ್ರದೇಶದವರು, ನಗರ ಪ್ರದೇಶದವರು. ಕಾಲೇಜಿನ ಯುವಕ / ಯುವತಿಯರು, ಯುವಕ/ಯುವತಿ ಸಂಘದ ಸದಸ್ಯರು ಭಾಗವಹಿಸಬಹುದಾಗಿರುತ್ತದೆ. ಭಾಗವಹಿಸುವ ಸ್ಪರ್ಧಾಳುಗಳು ಅವಶ್ಯಕ ವೇಷ ಭೂಷಣ, ಸಂಗೀತ ಉಪಕರಣ ಮತ್ತು ಸ್ಪರ್ಧೆಗೆ ಅವಶ್ಯವಿರುವ ಸಾಮಗ್ರಿಗಳನ್ನು ತಾವೇ ತರತಕ್ಕದ್ದು. ಭಾಗವಹಿಸುವ ಸ್ಪರ್ಧಾಳುಗಳಿಗೆ ಮಧ್ಯಾಹ್ನ ಲಘು ಉಪಹಾರವನ್ನು ಹಾಗೂ ತಾಲ್ಲೂಕಿನಿಂದ ಭಾಗವಹಿಸುವ ಸ್ಪರ್ಧಾಳುಗಳಿಗೆ ಬಂದು ಹೋಗುವ ಸಾಮಾನ್ಯ ಪ್ರಯಾಣ ದರ ನೀಡಲಾಗುವುದು.
ಆಸಕ್ತರು ನ. 16 ರಂದು ಶನಿವಾರ ಬೆಳಗ್ಗೆ 10.00 ಗಂಟೆಗೆ ಕುವೆಂಪು ರಂಗಮಂದಿರ, ಶಿವಮೊಗ್ಗ ಇಲ್ಲಿ ವರದಿ ಮಾಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂರವಾಣಿ ಸಂಖ್ಯೆ 99002-80416 ಮುಖಾಂತರ ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



