ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಅಧಿಕಾರಾವಧಿ ಪೂರೈಸಿದ ಬಳಿಕ ಸಂಪುಟ ಪುನಾರಚನೆ ಮಾಡಬೇಕು. ಈ ವೇಳೆ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಮಾಡಿಕೊಡಲು ತ್ಯಾಗಕ್ಕೆ ಸಿದ್ಧರಾಗಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಕರೆ ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವಾರು ಕಾರಣಗಳಿಂದ ಮೂರ್ನಾಲ್ಕು ಬಾರಿ ಗೆದ್ದಿರುವ ಶಾಸಕರಿಗೆ ಇನ್ನೂ ಅವಕಾಶಗಳು ಸಿಕ್ಕಿಲ್ಲ ಇವರಿಗೆ ಅವಕಾಶ ಕಲ್ಪಿಸಲು ತ್ಯಾಗ ಮಾಡಬೇಕು ಎಂದರು.
ಹೈಕಮಾಂಡ್ ಕೂಡಾ ಇದೇ ಚಿಂತನೆಯಲ್ಲಿ ಇದೆ. ಆದರೆ, ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರೇ ಮುಂದುವರೆಯಲಿದ್ದಾರೆ ಎಂದರು
2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷ ಕಟ್ಟಬೇಕಿದೆ. ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು, ಪಕ್ಷದ ಒಳಿತಿಗಾಗಿ ಅಭಿವೃದ್ಧಿ ಕೆಲಸಗಳ ಜೊತೆಗೆ ಎರಡನೇ ಹಂತದ ನಾಯಕರಿಗೆ ಅವಕಾಶ ಮಾಡಿಕೊಡಬೇಕು ಎಂದರು.
ನಾನು ಬಹಳ ಹಿಂದೆಯೇ ಸದುದ್ದೇಶದಿಂದ ಈ ಮಾತು ಹೇಳಿದ್ದೆ. ಆ ಮಾತಿಗೆ ನಾನು ಈಗಲೂ ಬದ್ಧ. ರಾಜಕೀಯವಾಗಿ ಪಕ್ಷ ಕಟ್ಟಬೇಕಾದರೆ ತ್ಯಾಗ ಮಾಡಲು ಸಿದ್ಧರಿರಬೇಕು. ಆದರೆ, ಅಂತಿಮವಾಗಿ ತೀರ್ಮಾನ ಮಾಡುವುದು ಹೈಕಮಾಂಡ್ ಎಂದರು.




