ಬೆಂಗಳೂರು: ದಾಸರಹಳ್ಳಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರದ ಅಭ್ಯರ್ಥಿ ರಾಜೀವ್ಗೌಡ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರನ್ನು ಇಲ್ಲಿಂದಲೂ ವಾಪಸ್ ಕಳುಹಿಸಬೇಕು ಎಂದು ಮನವಿ ಮಾಡಿದರು.
ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದರು.




