ವಿಜಯನಗರ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಹರಪನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನು ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದರು.
ಆರ್.ಎಸ್.ಎಸ್. ನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ ಎಂದರು.
ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೆ. ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಎಂದರು.
ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬಿನ ಬೆಲೆ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.




