ಬಳ್ಳಾರಿ: ಸರ್ಕಾರಿ ಹುದ್ದೆಗೆ ನೇಮಕಗೊಂಡಿರುವ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಗೌರವ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಹೇಳಿದರು.
- ಕಲಾಗ್ರಾಮದಲ್ಲಿ ಸ್ಪರ್ಶ ಮಕ್ಕಳ ನಾಟಕೋತ್ಸವ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ 88ನೇ ಸಾಮಾನ್ಯ ಬುನಾದಿ ತರಬೇತಿಯ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರಿ ಕೆಲಸ-ಕಾರ್ಯಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಸಮಯ ಪಾಲನೆ ಹೊಂದಬೇಕು. ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಶುಭವಾಗಲಿ ಎಂದರು.
ಈ ವೇಳೆ ಜಿಲ್ಲಾ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯ ಶೇಷಗಿರಿ ನಾಯ್ಕ ಸೇರಿದಂತೆ ಅಭ್ಯರ್ಥಿಗಳು ಹಾಜರಿದ್ದರು.




