ಬಳ್ಳಾರಿ: ಸರ್ಕಾರಿ ಹುದ್ದೆಗೆ ನೇಮಕಗೊಂಡಿರುವ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಗೌರವ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ 88ನೇ ಸಾಮಾನ್ಯ ಬುನಾದಿ ತರಬೇತಿಯ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರಿ ಕೆಲಸ-ಕಾರ್ಯಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಸಮಯ ಪಾಲನೆ ಹೊಂದಬೇಕು. ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಶುಭವಾಗಲಿ ಎಂದರು.
ಈ ವೇಳೆ ಜಿಲ್ಲಾ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯ ಶೇಷಗಿರಿ ನಾಯ್ಕ ಸೇರಿದಂತೆ ಅಭ್ಯರ್ಥಿಗಳು ಹಾಜರಿದ್ದರು.




