ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ.
ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು.
ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ.
ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು.
– ಸಿದ್ದರಾಮಯ್ಯ, ಸಿಎಂ




