ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಹೇಳಿಕೆ
ಶಿವಮೊಗ್ಗ: ಶಿವಮೊಗ್ಗ ಸಂಪದ್ಭರಿತ ಜಿಲ್ಲೆಯಾಗಿದ್ದು, ಇಲ್ಲಿ ಸ್ವಉದ್ಯೋಗ ಮಾಡಲು ಬಹಳ ಅವಕಾಶಗಳಿವೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಈ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್ ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಪಶು ಸಖಿ ಮತ್ತು ಬ್ಯೂಟಿಪಾರ್ಲರ್ ಮ್ಯಾನೆಜ್ಮೇಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಸಂಸ್ಥೆಯ ನಿರ್ದೇಶಕ ಕಾಂತೇಶ ಅಂಬಿಗಾರ್ ಮಾತನಾಡಿ, ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದ್ದಂತೆ. ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು ಎಂದರು. ಜೊತೆಗೆ, ಸಂಸ್ಥೆಯ ಕಿರು ಪರಿಚಯ ಮಾಡಿಕೊಟ್ಟರು.
ಉಪನ್ಯಾಸಕ ಸುರೇಶ್ ವೈ ಹಳ್ಳಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವಯೋಗಿ ಯೆಲಿ, ಉಪ ನಿರ್ದೇಶಕರು, ಪಶು ವೈದ್ಯಕೀಯ ಇಲಾಖೆ ಶಿವಮೊಗ್ಗ ಇವರು ಪಶು ಇಲಾಖೆಯ ಬಗ್ಗೆ ಮತ್ತು ಪಶು ಸಖಿಯರ ಕಾರ್ಯ ವೈಖರಿಯ ಬಗ್ಗೆ ಮಾಹಿತಿ ನೀಡಿದರು. ಡೋಮೈನ್ ಸ್ಕೀಲ್ ಟ್ರೈನರ್ ಆದಂತಹ ಕತ್ಮುನಿಸಾ ಮತ್ತು ದೀಪಾ ಹಾಜರಿದ್ದರು.




