ಶೂ ಎಸೆತ ಘಟನೆ ಖಂಡನೀಯ: ಡಿ ಕೆ ಶಿವಕುಮಾರ್

6 months ago

ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ಖಂಡನೀಯ: ಡಿ ಕೆ ಶಿವಕುಮಾರ್

ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ಖಂಡನೀಯ, ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ವಿರೋಧಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದರು.

Leave a Reply