ಬೆಂಗಳೂರು: ಯಾದಗಿರಿ ಸಬ್ ಇನ್ಸ್ ಪೆಕ್ಟರ್ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೃಹ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನೆಲ್ಲೇ ಕೇಂದ್ರ ಸರ್ಕಾರ ಈ ಸಂಬಂಧ ವರದಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಕುರಿತು ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪಿಸಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು, ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಈ ನಡುವೆ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿದ್ದಾರೆ. ತನಿಖೆ ಜವಾಬ್ದಾರಿ ತೆಗೆದುಕೊಂಡ ಆರು ದಿನಗಳಲ್ಲಿ ಸಿಐಡಿ ಎಸ್.ಪಿ. ಎಂಟ್ರಿ ಕೊಟ್ಟಿದ್ದರು. ಪರಶುರಾಮ ಕುಟುಂಬಸ್ಥರನ್ನು ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಜೊತೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.
ಯಾದಗಿರಿ ನಗರ ಠಾಣೆಯಿಂದ ಸೈಬರ್ ಠಾಣೆಗೆ ವರ್ಗಾವಣೆ ಆಗಿದ್ದ ಪಿಎಸ್ಐ ಪರಶುರಾಮ ಸಾವಾಗಿ ಹಲವು ದಿನಗಳು ಕಳೆದಿವೆ. ಸಾವಾಗಿ ಮಾರನೇ ದಿನವೇ ಕೇಸ್ ಅನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಕೇಸ್ ಅನ್ನುನ್ನ ತನಿಖೆಯ ಜವಾಬ್ದಾರಿ ವಹಿಸಿಕೊಂಡ ಮಾರನೇ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಆಗಮಿಸಿದ ಯಾದಗಿರಿ ಡಿವೈಎಸ್ಪಿ ಕಚೇರಿಯಲ್ಲಿ ಸಾಕಷ್ಟು ಮಾಹಿತಿ ಕಲೆಹಾಕಿದ್ದರು.
ಮೃತ ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹಾಗಾಗಿ ಇಡೀ ಕುಟುಂಬ ಸದ್ಯ ಖುಷಿಯಲ್ಲಿದೆ. ಗಂಡು ಮಗುವಿನ ಆಗಮನದೊಂದಿಗೆ ಮತ್ತೆ ಪರಶುರಾಮನೇ ಹುಟ್ಟಿ ಬಂದಿದ್ದಾನೆ ಎಂದು ಕುಟುಂಬ ಸಂಭ್ರಮದಲ್ಲಿದೆ.




