ಬೆಂಗಳೂರು: ಯಾದಗಿರಿ ಸಬ್ ಇನ್ಸ್ ಪೆಕ್ಟರ್ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೃಹ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನೆಲ್ಲೇ ಕೇಂದ್ರ ಸರ್ಕಾರ ಈ ಸಂಬಂಧ ವರದಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಕುರಿತು ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪಿಸಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು, ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಈ ನಡುವೆ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿದ್ದಾರೆ. ತನಿಖೆ ಜವಾಬ್ದಾರಿ ತೆಗೆದುಕೊಂಡ ಆರು ದಿನಗಳಲ್ಲಿ ಸಿಐಡಿ ಎಸ್.ಪಿ. ಎಂಟ್ರಿ ಕೊಟ್ಟಿದ್ದರು. ಪರಶುರಾಮ ಕುಟುಂಬಸ್ಥರನ್ನು ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಜೊತೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.
ಯಾದಗಿರಿ ನಗರ ಠಾಣೆಯಿಂದ ಸೈಬರ್ ಠಾಣೆಗೆ ವರ್ಗಾವಣೆ ಆಗಿದ್ದ ಪಿಎಸ್ಐ ಪರಶುರಾಮ ಸಾವಾಗಿ ಹಲವು ದಿನಗಳು ಕಳೆದಿವೆ. ಸಾವಾಗಿ ಮಾರನೇ ದಿನವೇ ಕೇಸ್ ಅನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಕೇಸ್ ಅನ್ನುನ್ನ ತನಿಖೆಯ ಜವಾಬ್ದಾರಿ ವಹಿಸಿಕೊಂಡ ಮಾರನೇ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಆಗಮಿಸಿದ ಯಾದಗಿರಿ ಡಿವೈಎಸ್ಪಿ ಕಚೇರಿಯಲ್ಲಿ ಸಾಕಷ್ಟು ಮಾಹಿತಿ ಕಲೆಹಾಕಿದ್ದರು.
ಮೃತ ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹಾಗಾಗಿ ಇಡೀ ಕುಟುಂಬ ಸದ್ಯ ಖುಷಿಯಲ್ಲಿದೆ. ಗಂಡು ಮಗುವಿನ ಆಗಮನದೊಂದಿಗೆ ಮತ್ತೆ ಪರಶುರಾಮನೇ ಹುಟ್ಟಿ ಬಂದಿದ್ದಾನೆ ಎಂದು ಕುಟುಂಬ ಸಂಭ್ರಮದಲ್ಲಿದೆ.




