ಬೆಂಗಳೂರು: ಸೋಲಿನ ಭೀತಿಯಲ್ಲಿರುವ ರಾಜ್ಯಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ,ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ ಅಧ:ಪತನವಲ್ಲದೆ ಮತ್ತೇನು?
ಗಣಿಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು.
ಈಗ ಹೊಸ ರೌಡಿಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳಿಸಲು?
ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ ಮಂತ್ರ ಉದುರಿಸುವ ಆರ್ ಎಸ್ ಎಸ್ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರೆಸಿಕೊಂಡದ್ದು ರೌಡಿಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರ್ ಎಸ್ ಎಸ್ ಮೌನ ಸಮ್ಮತಿ ಲಕ್ಷಣವೇ?



