ಬೆಳಗಾವಿ: ಶಾಲಾ ಪ್ರವಾಸಕ್ಕೆಂದು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿದ ಮಕ್ಕಳಿಗೆ ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಂದು ಶರಣರು ಸಾರಿದ ಸಮಾನತೆ, ಜಾತ್ಯತೀತತೆ, ಸಹಬಾಳ್ವೆ, ವ್ಯಕ್ತಿ ಸ್ವಾತಂತ್ರ್ಯ ಘನತೆಯ ಬದುಕಿನ ಹಕ್ಕುಗಳು ಇಂದು ನಮ್ಮ ಸಂವಿಧಾನದ ಆಶಯಗಳಾಗಿವೆ. ಇವು ಪ್ರತಿಯೊಬ್ಬರ ಆಶಯಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಶ್ವಮಾನವರಾಗಿ ಹುಟ್ಟುವ ಮಕ್ಕಳು ಜಾತಿ, ಧರ್ಮ, ವರ್ಣ, ಕಂದಾಚಾರ ಮುಂತಾದ ಸಂಕುಚಿತ ಚಿಂತನೆಯ ಪ್ರಭಾವಕ್ಕೆ ಒಳಗಾಗಿ ಅಲ್ಪಮಾನವರಾಗುತ್ತಿದ್ದಾರೆ ಎಂದರು.
ಮಹಾಪುರುಷರ ಜೀವನಾದರ್ಶಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿಸುವ ಮೂಲಕ ಅವರನ್ನು ಈ ಜಾತಿ, ಧರ್ಮ, ಮೂಢನಂಬಿಕೆಗಳ ಅಲ್ಪತನದಿಂದ ಮುಕ್ತಗೊಳಿಸಿ ವಿಶ್ವಮಾನವರನ್ನಾಗಿಸೋಣ ಎಂದು ಅವರು ಇದೇ ವೇಲೆ ಕರೆ ನೀಡಿದರು.




