ಸಿದ್ದರಾಮಯ್ಯ ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು: ಕುಮಾರಸ್ವಾಮಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರ ಜಾಗದಲ್ಲಿ ಮನೆಯನ್ನು ಕಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಮನೆ ಕಟ್ಟಿದ್ದರು. ಆ ಮನೆ ಮಾರಾಟವಾಗಿದ್ದರೂ ಇದು ಯಾರ ಸ್ವಾಧೀನದಲ್ಲಿದೆ ಎಂಬುದು ಗೊತ್ತಿದೆ, ಈ ಸಂಬಂಧ ದಾಖಲೆಗಳು ತಮ್ಮ ಬಳಿ ಇವೆ ಎಂದರು.
ನಾನು ಕೇಂದ್ರ ಸಚಿವನಾಗಿರುವುದನ್ನು ಸಹಿಸಲಾಗುತ್ತಿಲ್ಲ. ಕರ್ನಾಟಕಕ್ಕೆ ಬಂದರೆ ಸಹಿಸುವುದಿಲ್ಲ, ಮುಗಿದೇ ಹೋಯಿತು ಎನ್ನುತ್ತಿದ್ದರು. ಅಂತಹ ಸಂದರ್ಭದಲ್ಲೇ ಕೇಂದ್ರ ಸಚಿವನಾಗಿರುವುದು ಅವರಿಗೆ ನೋವು ತಂದಿದೆ. ಇದಕ್ಕೆ ಔಷಧಿಯನ್ನು ಎಲ್ಲಿಂದ ತರಲಿ ಎಂದರು.




