ಸಿದ್ದರಾಮಯ್ಯ ಜಾರಿ ನಿರ್ದೇಶನಾಲಯದ ಕುಣಿಕೆಗೆ ಸಿಲುಕುವ ಸಾಧ್ಯತೆ

1 year ago

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಜಾರಿ ನಿರ್ದೇಶನಾಲಯದ ಕುಣಿಕೆಗೆ ಸಿಲುಕುವ ಸಾಧ್ಯತೆ ದಟ್ಟವಾಗತೊಡಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಈಗಾಗಲೇ ಮೈಸೂರು ನಗರ ಅಭಿವೃದ್ಧಿ ಕಚೇರಿ ಮತ್ತು ಕೆಲವು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದೆ. ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡಿರುವ ದಾಖಲೆ ಪತ್ರಗಳ ಆಧಾರದಲ್ಲಿ ವಿಚಾರಣೆಗೆ ಬರುವಂತೆ ಮುಡಾ ಮಾಜಿ ಅಧ್ಯಕ್ಷ ಮರಿಗೌಡ, ಮಾಜಿ ಆಯುಕ್ತರಾದ ದಿನೇಶ್, ನಟೇಶ್ ಸೇರಿದಂತೆ ಏಳು ಜನರಿಗೆ  ನೋಟಿಸ್ ನೀಡಿದೆ.

ಇದರ ಮುಂದುವರೆದ ಭಾಗವಾಗಿ ಸಿಎಂ ಸಿದ್ದರಾಮಯ್ಯನವರ ಮನೆಬಾಗಿಲನ್ನು ಜಾರಿ ನಿರ್ದೇಶನ ಇಲಾಖೆ ಅಧಿಕಾರಿಗಳು ಬಡಿಯಲಿದ್ದಾರೆ. ಮೇಲಿನವರ ವಿಚಾರಣೆ ಮುಗಿದ ನಂತರ ಸಿದ್ದರಾಮಯ್ಯ ವಿಚಾರಣೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.

Leave a Reply