ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿದೆಯೇ? ಚಿಕಿತ್ಸೆ ಪಡೆಯುವಲ್ಲಿ ಏನಾದರೂ ಅಡೆತಡೆಗಳಿವೆಯೇ? ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಸ್ಪಂದನೆ ಹೇಗಿದೆ? ಎಂಬುದನ್ನು ಸ್ವತಃ ರೋಗಿಗಳಿಂದಲೇ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಬಹುತೇಕರು ಬಡವರು. ಖಾಸಗಿ ಆಸ್ಪತ್ರೆಯ ವೆಚ್ಚ ಭರಿಸಲಾಗದ ಕಾರಣಕ್ಕಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂದಿದ್ದಾರೆ.
ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಯಾವೊಬ್ಬ ರೋಗಿಯು ಗುಣಮಟ್ಟದ ಚಿಕಿತ್ಸೆಯಿಂದ ವಂಚಿತನಾಗಬಾರದೆಂದು ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಒದಗಿಸಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳು ಕೂಡ ಖಾಸಗಿ ಆಸ್ಪತ್ರೆಗಳಂತೆ ಉತ್ತಮ ಸೇವೆ, ಉತ್ಕೃಷ್ಟ ಸೌಲಭ್ಯ ಒದಗಿಸಲೇಬೇಕು. ಈ ವಿಷಯದಲ್ಲಿ ಯಾವ ರಾಜಿಯೂ ಇಲ್ಲ ಎಂದು ಹೇಳಿದ್ದಾರೆ.










