ಬೆಂಗಳೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಭೇಟಿನೀಡಿದ ಸಿಬ್ಬಂದಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.







