ಬೆಳಗಾವಿ: “ನಮ್ಮ ಊರಿಗೆ ನಮ್ಮ ಶಾಸಕರು” ಕಾರ್ಯಕ್ರಮದ ಯಶಸ್ಸಿಗಾಗಿ ಶಾಸಕರಾದ ಪ್ರದೀಪ್ ಈಶ್ವರ್ ಅವರ ಹೆಗಲಿಗೆ ಹೆಗಲಾಗಿ ದುಡಿಯುತ್ತಿರುವ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಮಂಚೇನಹಳ್ಳಿ ತಹಸೀಲ್ದಾರ್ ದೀಪ್ತಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ ಅವರ ಶ್ರಮ ಕೂಡ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಇದುವರೆಗೆ ಸುಮಾರು 50 ಹಳ್ಳಿಗಳಿಗೆ ತೆರಳಿ ರಸ್ತೆ, ಚರಂಡಿ, ಬಸ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಪಿಂಚಣಿ, ನಿವೇಶನ ಹೀಗೆ ಸಾರ್ವಜನಿಕರ ನಿತ್ಯ ಬದುಕಿಗೆ ತೊಡಕಾಗಿದ್ದ ಹಲವು ಸಮಸ್ಯೆಗಳನ್ನು ಆಲಿಸಿ, ಪರಿಹರಿಸಿದ್ದಾರೆ. ಈ ಕಾರ್ಯಕ್ರಮ ಇನ್ನಷ್ಟು ಜನರನ್ನು ತಲುಪುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ನೆರವಾಗಲಿ ಎಂದು ಆಶಿಸಿದ್ದಾರೆ.



