ಬೆಂಗಳೂರು: ಮಾರ್ಚ್ 3 ರಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲಿದ್ದಾರೆ.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ಈ ಬಜೆಟ್ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆಯಿದೆ. ಈ ಮೂಲಕ ಹೊಸ ದಾಖಲೆ ನಿರ್ಮಾಣವಾದರೆ ಅತಿ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ದಾಖಲೆ ಸಿದ್ದರಾಮಯ್ಯ ಅವರ ಪಾಲಾಗಲಿದೆ. ಕಾಲು ನೋವಿನ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಿಂದ ಮನೆಯಲ್ಲಿಯೇ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ಆಗಮಿಸಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
ವಿವಿಧ ರೈತ ಸಂಘಟನೆಗಳ ಪ್ರಮುಖರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. 7ರಂದು ಬಜೆಟ್ ಮಂಡಿಸಲಾಗುವುದು ಎಂದರು.
ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಅವರ ಭಾಷಣದ ಮೇಲೆ ಚರ್ಚೆ ಇರುತ್ತದೆ. ಎಷ್ಟು ದಿನ ಅಧಿವೇಶನ ನಡೆಸಬೇಕು ಅನ್ನೋದನ್ನು ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದರು.
ನನಗೆ ಕಾಲು ನೋವು ಇದ್ದರೂ ಮನೆಯಲ್ಲಿ ಕುಳಿತು ಇಲಾಖೆಗಳ ಸಭೆ ನಡೆಸಿದ್ದೇನೆ. ಇಂದು ರೈತ ಮುಖಂಡರ ಸಭೆ ಮಾಡಿದ್ದೇನೆ. ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ ಎಂದರು.
ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೊ ಅದು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡಾ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.




