ಬೆಂಗಳೂರು: ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿ ಅಂಶ ಒಡ್ಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿರುವ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ಎಸ್ಐಟಿ ರಚನೆ ಮಾಡಲಾಗುತ್ತಿದೆ. ಆಪರೇಷನ್ ಕಮಲಕ್ಕೆ 50 ಕೋಟಿ ಆಮಿಷ ಒಡ್ಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಆರೋಪ ಮಾಡಿದ್ದಾರೆ. ಈ ಆರೋಪದ ಬಗ್ಗೆ ನಿಖರವಾಗಿ ಹೇಳುತ್ತಿದ್ದಾರೆ. ಸರ್ಕಾರ ನಡೆಸುತ್ತಿರುವವರೂ ಅವರೇ. ಇದಕ್ಕೂ ಒಂದು ಎಸ್ಐಟಿ ರಚನೆ ಮಾಡಿ ತನಿಖೆ ಮಾಡಿಸಲಿ ಎಂದರು.
ರಾಜ್ಯ ಮತ್ತು ದೇಶದ ಇತಿಹಾಸದಲ್ಲಿ ಇಷ್ಟೊಂದು ಎಸ್ಐಟಿ ರಚನೆಯಾಗಿರುವುದು ದಾಖಲೆಯಾಗಿದೆ. ಪ್ರತಿಯೊಂದು ವಿಚಾರಕ್ಕೂ ಎಸ್ಐಟಿ ರಚನೆ ಮಾಡುವುದಾಗಿ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರು ಆಪರೇಷನ್ ಕಮಲದ ಬಗ್ಗೆ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು.



