ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ಹೇಳಿದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಬಂದಿದ್ದು ಯಾವ ದೇಶದಿಂದ ಎಂಬ ಬಗ್ಗೆ ವಿಶೇಷ ತನಿಖಾ ದಳ(ಎಸ್ಐಟಿ) ಪರಿಶೀಲನೆ ಕೈಗೊಂಡಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಾಜ್ಯದ ಜನತೆಗೆ ಕ್ಷಮಾಪಣೆ ಕೇಳಿದ ಪ್ರಜ್ವಲ್ ರೇವಣ್ಣ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆಗೆ ಭಾರತಕ್ಕೆ ಬರುವುದಾಗಿ ತಿಳಿಸಿ ವೀಡಿಯೋ ಮಾಡಿ ಹಂಚಿಕೊಂಡಿದ್ದರು. ಈ ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದನ್ನು ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕಳೆದ ಬಾರಿ ಕೂಡ ಬರಲಿದ್ದೇನೆ ಎಂದು ಹೇಳಿ ಪ್ರಜ್ವಲ್ ರೇವಣ್ಣ ಒಂದು ವಾರಗಳ ಕಾಲಾವಕಾಶ ಕೋರಿದ್ದರು. ಆದರೆ ಒಂದು ವಾರ ಕಳೆದರೂ ವಾಪಸ್ ಆಗದೇ ಗೈರಾದರು. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಸಂಪರ್ಕಿಸಲು ಎಸ್ಐಟಿ ಪ್ರಯತ್ನಿಸುತ್ತಿದೆ.
ಪ್ರಜ್ವಲ್ ರೇವಣ್ಣ ವಾಪಸಾಗುತ್ತಿರುವುದರಿಂದ ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬರಲಿದ್ದಾರಾ ಅಥವಾ ಬೇರೆ ಯಾವ ವಿಮಾನ ನಿಲ್ದಾಣಕ್ಕೆ ಬರಬಹುದು ಎಂದು ಎಸ್ಐಟಿ ಯೋಚಿಸಿದ್ದು, ಅಲರ್ಟ್ ಆಗಿದೆ.
ಎಲ್ಲೇ ಬಂದು ಇಳಿದರೂ ಸನ್ನದ್ದರಾಗಿ ವಶಕ್ಕೆ ಪಡೆಯಲು ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ. ಬೇರೆ ಏರ್ಪೋರ್ಟ್ಗೆ ಬಂದಲ್ಲಿ ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ಈ ಸಂಬಂಧ ನಿನ್ನೆ ಎಸ್ಐಟಿ ಅಧಿಕಾರಿಗಳ ಸಭೆ ನಡೆದಿದೆ. ಪ್ರಜ್ವಲ್ ರೇವಣ್ಣ ವಾಪಸ್ ಆದ ನಂತರದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.




