ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಾಂಸ್ಕೃತಿಕ ಸಮುಚ್ಛಯ ನಿರ್ವಹಣಾ ಸಮಿತಿ ವತಿಯಿಂದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜುಲೈ 20 ರಂದು ಸಂಜೆ 06.30 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರ ಸಾಂಸ್ಕೃತಿಕ ಸಮುಚ್ಛಯದಲ್ಲಿ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಕಾರ್ಯಕ್ರಮದಲ್ಲಿ ಬಳ್ಳಾರಿಯ ಪ್ರಕಾಶ್ ಹೆಮ್ಮಾಡಿ ಅವರಿಂದ ಜಾನಪದ ಜಾದು ಕಾರ್ಯಕ್ರಮ ಮತ್ತು ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿಯ ಧಾತ್ರಿ ರಂಗ ಸಂಸ್ಥೆಯಿಂದ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕ ಕಾರ್ಯಕ್ರಮ ಇರಲಿವೆ.
ಸಾರ್ವಜನಿಕರಿಗೆ ಪ್ರವೇಶ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ವೀಕ್ಷಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಸಂಸ್ಕೃತಿ ಇಲಾಖೆ ಕೋರಿದೆ.





