ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಕಾಲವಶ

8 months ago

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ನಿನ್ನೆ ರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಕಾಲವಶರಾಗಿದ್ದಾರೆ.

ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿರವರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಇಂದು 16-08-2025ನೇ ಶನಿವಾರ ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ವಿವಿಧ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿದೆ.

ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿರವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೇರವೇರಿಸಲಿದ್ದಾರೆ.

Leave a Reply