ಬೆಂಗಳೂರು: ಸೈಬರ್ ಅಪರಾಧಗಳನ್ನು ಪರಿಣಾಮಕಾರಿ ತಡೆಗಟ್ಟುವ ಸಲುವಾಗಿ ಸಿಇಎನ್ ಪೊಲೀಸ್ ಠಾಣೆಗಳಿಗೆ ಹೆಚ್ಚಿನ ತರಬೇತಿ ಹೊಂದಿದ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ವಿಧಾನ ಪರಿಷತ್ ನಲ್ಲಿ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಆನ್ ಲೈನ್ ವಂಚನೆ ಸೇರಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು, ಪತ್ತೆಹಚ್ಚಲು, ಆರೋಪಿಗಳ ಬಂಧನದ ನಿಗಾ ವಹಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ)ಮಟ್ಟದ ಅಧಿಕಾರಿಯನ್ನು ನಿಯೋಸಲಾಗಿದೆ ಎಂದರು.
ಸಿಐಡಿ ವಿಭಾಗದಲ್ಲಿ ಸೈಬರ್ ಅಪರಾಧಗಳ ತನಿಖೆ ಸಂಶೋಧನೆ, ತರಬೇತಿಗಾಗಿ (ಸಿಸಿಐಟಿಆರ್)ಘಟಕವನ್ನು ಎಡಿಜಿಪಿ ನೇತೃತ್ವದಲ್ಲಿ ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಸಂಸ್ಥೆಗಳು, ನ್ಯಾಯಾಧೀಶರುಗಳಿಗೆ, ಕಾನೂನು ಅಭಿಯೋಜಕರಿಗೆ, ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳನ್ನು ತನಿಖೆ ಮತ್ತು ಪತ್ತೆ ಮಾಡುವ ಬಗ್ಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿಯೂ ಸೈಬರ್ ಅಪರಾಧಗಳ ದೂರನ್ನು ಸ್ವೀಕರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಸೈಬರ್ ಕ್ರೈಂ ಅಪರಾಧಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಮೂಡಿಸಲು ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಎಲ್ಲಾ ವರ್ಗದ ಜನಗಳಿಗೂ ಸಾಮಾಜಿಕ ಜಾಲತಾಣ ಮತ್ತು ಎಲ್ಲಾ ಮಾಧ್ಯಮಗಳಿಂದಲೂ ಸಹ ಸಾಮಾನ್ಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಸೈಬರ್ ಅಪರಾಧಗಳ ತನಿಖೆ ಕೈಪಿಡಿಯನ್ನು ರಾಜ್ಯದ ಎಲ್ಲಾ ಘಟಕಗಳಿಗೆ, ಪೊಲೀಸ್ ಠಾಣೆಗಳಿಗೆ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳಿಗೆ ಕಳುಹಿಸಿಕೊಡಲಾಗಿದ್ದು, ಅದರಂತೆ, ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಬ್ಯಾಂಕಿಂಗ್ ಅಪರಾಧಗಳಿಗೆ ಸಂಬಂಧಿಸಿದಂತೆ ಆರ್ ಬಿಐ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬ್ಯಾಂಕಿಂಗ್ ಹಾಗೂ ಇತರ ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.



