ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ: ಥಾವರ್ ಚಂದ್ ಗೆಹ್ಲೋಟ್

1 year ago

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಅವರು, ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂಬ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದರು.

ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ರಾಜ್ಯ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದರು.

Leave a Reply