ಹೊಸಪೇಟೆ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಭೋಸರಾಜು ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್ ನಾನೋಸೀಮ್ ಡೋಮ್ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.




