ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ತರಕಾರಿ ನೌಕರರ ಸಂಬಳ ಸೇರಿದಂತೆ ವಿವಿಧ ವಲಯಗಳ ವಿನಿಯೋಗಕ್ಕಾಗಿ 3,352.57 ಕೋಟಿ ರೂ. ಮೊತ್ತದ ರಾಜ್ಯದ ಪೂರಕ ಅಂದಾಜು ಮಂಡಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಂಡಿಸಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪೂರಕ ಅಂದಾಜುಗಳು ಹೆಚ್ಚುವರಿ ಅನುದಾನಗಳು ಮತ್ತು ಲೆಕ್ಕ ಹೊಂದಾಣಿಕೆಗಳಿಗೆ ಸಂಬಂಧಿಸಿವೆ. ಒಟ್ಟು ಮೊತ್ತದಲ್ಲಿ 0.60 ಕೋಟಿ ರೂ. ಪ್ರಕೃತ ವೆಚ್ಚ ಮತ್ತು 3,351.97 ಕೋಟಿ ರೂ. ಪುರಸ್ಕೃತ ವೆಚ್ಚ ಸೇರಿವೆ. ಮೀಸಲು ನಿಧಿಯಿಂದ ಭರಿಸಲಾಗುವ 262.20 ಕೋಟಿ ರೂ. ಸಹ ಪುರಸ್ಕೃತವಾಗಬೇಕಾಗಿದೆ. ಇದರಲ್ಲಿ ಕೇಂದ್ರ ಸಹಾಯಕ್ಕೆ ಸಂಬಂಧಿಸಿದ ರೂ. 820.70 ಕೋಟಿ ಸೇರಿದೆ. ಹೊರ ಹೋಗುವ ನಿವ್ವಳ ನಗದು ಮೊತ್ತ 2,269.66 ಕೋಟಿ ರೂ. ಆಗಿದೆ.
ಈ ಮೊತ್ತವನ್ನು ರಾಜ್ಯದ ರಾಜಸ್ವ ಸ್ವೀಕೃತಿಗಳು, ವೆಚ್ಚದ ಮರುಪ್ರಾಧಾನ್ಯತೆ, ಸಂಭವನೀಯ ಉಳಿತಾಯ ಮತ್ತು ಸಾಲದ ಮೂಲಕ ಭರಿಸಲಾಗುತ್ತದೆ ಎಂದು ಹೇಳಲಾಗಿದೆ.



