ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ನಿದೇರ್ಶಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ.ನಾಗೇಂದ್ರ ಅವರ ನೇರ ಪಾತ್ರ ಇದೆ ಎಂದು ಆರೋಪಿಸಿರುವ ಬಿಜೆಪಿ ರಾಜೀನಾಮೆಗೆ ಪಟ್ಟು ಹಿಡಿದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಕ್ರಮದ ಸುಳಿಗೆ ಸಿಲುಕಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ನಾಗೇಂದ್ರ ಜೂನ್ 6 ರೊಳಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ರಾಜ್ಯದ್ಯಂತ ಹೋರಾಟ ನಡೆಸುವುದಾಗಿ ಬೆದರಿಕೆ ಹಾಕಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಆಶೋಕ್, ಮಾಜಿ ಸಚಿವರಾದ ಸಿಟಿ ರವಿ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸಿಕೆ ರಾಮಮೂರ್ತಿ ಅವರುಗಳು ಸಚಿವ ನಾಗೇಂದ್ರ ಜೂನ್ 6 ರೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ, ರಾಜ್ಯದ್ಯಾಂತ ಹೋರಾಟ ಆರಂಭಿಸುವುದಾಗಿ ಘೋಷಿಸಿದರು.
ಆರ್ ಅಶೋಕ್ ಮಾತನಾಡಿ, ಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು. ಜೂನ್ 6 ರೊಳಗೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಇಡೀ ರಾಜ್ಯಾದ್ಯಂತ ದಲಿತರ ಹಣವನ್ನು ನುಂಗಿದ ಕಾಂಗ್ರೆಸ್ ಎಂದು ಹೋರಾಟ ಮಾಡುತ್ತೇವೆ. ಈ ವಿಷಯ ವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯವ ತನಕ ಬಿಡುವುದಿಲ್ಲ ಎಂದರು.
ಸಚಿವ ನಾಗೇಂದ್ರ ಅವರ ಸೂಚನೆಯ ಮೇರೆಗೆ ಈ ಅಕ್ರಮ ನಡೆದಿದೆ. ದಲಿತರ ಹಣ ಲೂಟಿ ಆಗಿರುವುದನ್ನು ನೋಡಿಕೊಂಡು ಬಿಜೆಪಿ ಸುಮ್ಮನೆ ಕೂರಬಾರದು ಎಂಬ ತೀರ್ಮಾನವನ್ನು ಪಕ್ಷದ ಉನ್ನತ ನಾಯಕತ್ವ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಚಿವರ ರಾಜೀನಾಮೆ ಪಡೆಯಬೇಕು ಎಂದರು.
ಡೆತ್ ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಿಂದ ಹಣ ವರ್ಗಾವಣೆ ಬಗ್ಗೆ ಅವರು ಬರೆದಿದ್ದಾರೆ. ಇಷ್ಟು ಸ್ಪಷ್ಟವಾಗಿ ಆಗಿ ಡೆತ್ ನೋಟ್ ಬರೆದಿರುವ ಅಧಿಕಾರಿಯನ್ನು ನಾನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಅವರು ಸಂಪೂರ್ಣವಾಗಿ ವಿವರವುಳ್ಳ ಮಾಹಿತಿಯನ್ನು ಡೀಟೈಲ್ಸ್ ಬರೆದಿದ್ದಾರೆ. ಲೂಟಿ ಮಾಡಿರುವುದು ಕಂಡು ಬಂದಿದೆ. ಇದರಲ್ಲಿ ನನ್ನ ತಪ್ಪೇನು ಇಲ್ಲ, ಮತ್ತೊಮ್ಮೆ ನನ್ನ ಪರಿಸ್ಥಿತಿ ಕಾರಣ ಎಂದರೆ, ಮತ್ತೊಮ್ಮೆ ಎಲ್ಲರೂ ಕಾರಣ. ಈ ನಿಗಮಕ್ಕೆ ನಾನು ಏನು ವಂಚನೆ ಮಾಡಿರುವುದಿಲ್ಲ ಎಂದು ಬರೆದಿದ್ದಾರೆ. ಇದಕ್ಕಿಂತ ಬೇರೆ ದಾಖಲೆ ಇನ್ನೇನು ಬೇಕು ಎಂದರು.
ಎಫ್ಐಆರ್ ನಲ್ಲಿ ಸಚಿವರ ಹೆಸರು ಯಾಕಿಲ್ಲ? ಹಣ ಗುಳುಮ್ ಮಾಡಿದ್ದ ಅಧಿಕಾರಿಗಳನ್ನು ಇದುವರೆಗೂ ಏಕೆ ಬಂಧಿಸಿಲ್ಲ? ಅವರನ್ನು ಬಂಧಿಸಿದರೆ, ನಿಮ್ಮ ಬಂಡವಾಳ ಬಯಲಿಗೆ ಬರುತ್ತದೆಯೇ ಎಂಬ ಭಯ ಕಾಡುತ್ತಿದೆಯೇ? ಪ್ರಕರಣವನ್ನು ಸಿಐಡಿಗೆ ಯಾಕೆ ಕೊಟ್ಟಿದ್ದಾರೆ ಎಂದರೆ, ಇದು ಕಾಂಗ್ರೆಸ್ ಇನ್ವಿಸ್ಟಿಗೇಷನ್ ಟೀಮ್ ಎಂದರು.
ಮಾಜಿ ಸಚಿವ ಸಿ ಟಿ ರವಿ ಮಾತನಾಡಿ, ಡೆತ್ ನೋಟ್ ನಲ್ಲಿ ನಾಗರಾಜ್ ಎಂಬವವರು ಹೆಸರು ಇದೆ. ನಾಗರಾಜ್ ಅವರು ನಾಗೇಂದ್ರ ಅವರ ವ್ಯಾವಹಾರಿಕ ಪಾರ್ಟ್ನರ್. ಅವರು ಹಲವು ಬಾರಿ ಸಿಎಂ, ಡಿಸಿಎಂ, ನಾಗೇಂದ್ರ ಜೊತೆ ವಿಶೇಷ ವಿಮಾನದಲ್ಲಿ ನವದೆಹಲಿಗೆ ಹೋಗಿದ್ದಾರೆ. ಇಂತಹವರು ಹೋಗಲು ಸಾಧ್ಯವೇ? ಬೇರೆಯವರ ಜೊತೆ ಸ್ಪೆಷಲ್ ಫ್ಲೈಟ್ ನಲ್ಲಿ ಹೋಗಲು ಸಾಧ್ಯವೇ ಎಂದರು.
ಇದು ದೊಡ್ಡ ಹಗರಣವಾಗಿದ್ದು, ನಾಗೇಂದ್ರ ಸಚಿವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು. ಸರ್ಕಾರ ವಜಾ ಆಗೋವರೆಗೂ ನಮ್ಮ ಹೋರಾಟ ಮಾಡುತ್ತೇವೆ ಎಂದರು.
ಮತ್ತೊಂದೆಡೆ ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕು ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಕುಮಾರ ಕೃಪ ಅತಿಥಿಗೃಹದ ಬಳಿ ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತ್ ನೇತೃತ್ವದಲ್ಲಿ ಸಮಾವೇಶಗೊಂಡ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ತೆರಳಲು ಮುಂದಾಗುತ್ತಿದ್ದಂತೆ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು.




