ಬೆಂಗಳೂರು: ಬರುವ ಒಂದೂವರೆ ತಿಂಗಳೊಳಗಾಗಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಶ್ನೋತ್ತರ ವೇಳೆಯಲ್ಲಿ ಹಿರಿಯ ಶಾಸಕ ಬಸನಗೌಡ ಆರ್.ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ರಾಜ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ 29 ಆಕ್ಷೇಪಣೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ಇನ್ನು 15 ದಿನಗಳಲ್ಲಿ ನಿಯಮಗಳನ್ನು ರೂಪಿಸಲಾಗುವುದು ಎಂದರು.
ಇ-ಸ್ವತ್ತು ಸಮಸ್ಯೆಗಳ ಸುಧಾರಣೆಗೆ ಸಮಿತಿ ರಚಿಸಲಾಗಿದೆ. ಅಲ್ಲದೆ ದಿಶಾಂಕ ಆ್ಯಪ್ ನ ಲೋಪದೋಷಗಳನ್ನು ಗಮನಕ್ಕೆ ತಂದರೆ ಸರಿಪಡಿಸಲಾಗುವುದು ಎಂದರು.
ರಾಜ್ಯದ ಎಲ್ಲಾ ಪಂಚಾಯ್ತಿಗಳಲ್ಲೂ ಮೈಕ್ರೋಗ್ರಿಡ್ ಪರಿಕಲ್ಪನೆ ಜಾರಿಗೆ ತಂದು ವಿದ್ಯುತ್ ಖರೀದಿಸಲಾಗುವುದು. ಈ ಮೈಕ್ರೋಗ್ರಿಡ್ ವಿನೂತನ ಯೋಜನೆ ಅನುಷ್ಠಾನಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆಂಡರ್ ಕರೆಯಲಾಗಿದೆ. ಈ ಯೋಜನೆಯಡಿ ಉತ್ಪಾದನೆಯಾದ ವಿದ್ಯುತ್ತನ್ನು ಬೀದಿ ದೀಪ, ಪಂಚಾಯ್ತಿ ಕಚೇರಿಗಳಿಗೆ ಬಳಕೆ ಮಾಡಿ ಉಳಿದ ವಿದ್ಯುತ್ನ್ನು ಗ್ರಿಡ್ಗೆ ಒಪ್ಪಿಸಲಾಗುವುದು ಎಂದರು.
ಹೊಸ ದಾಖಲೆ: ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಗ್ರಾಮ ಪಂಚಾಯಿತಿಗಳು ಹೊಸ ದಾಖಲೆಯನ್ನು ನಿರ್ಮಿಸಿವೆ. ಕಳೆದ ಎರಡು ವರ್ಷದಲ್ಲಿ 1237 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಇದು ದೇಶದಲ್ಲೇ ಹೊಸ ದಾಖಲೆಯಾಗಿದೆ ಎಂದರು.
ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕ್ರಮಬದ್ಧ ಆಸ್ತಿಗಳಿಗೆ ನಿಗದಿತ ನಮೂನೆ 9 ಹಾಗೂ 11ಎಗಳನ್ನು ನೀಡಲಾಗುತ್ತಿದ್ದು, ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ 11ಬಿ ಅನ್ನು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯ ಡಿಜಿಟಲ್ ಸಹಿ ಮೂಲಕ ವಿತರಿಸಲಾಗುತ್ತಿದೆ ಎಂದರು.
ಗ್ರಾಮೀಣ ರಸ್ತೆ ದುರಸ್ತಿ ಅಭಿವೃದ್ದಿಗೆ ಅನುದಾನ ಬಿಡುಗಡೆಗೆ ಮಾಡಲಾಗಿರುವ ನಿಯಮಾವಳಿಗಳನ್ನು ಸರಳೀಕರಣ ಮಾಡಿ ಅನುದಾನ ನೀಡಲಾಗುವುದು. ಈ ಮೂಲಕ 15ರಿಂದ 18 ಕಿ.ಮೀ ರಸ್ತೆಯನ್ನು ಶಾಸಕರ ವಿವೇಚನೆಯಡಿ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದರು.




